ಬೆಂಗಳೂರು : ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು,ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕರ್ತರಿಗೆ ಅಭಯ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಸಂವಿಧಾನ ನಮಗೆ ಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ಕಂಟ್ರೊಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.
ಕಾರ್ಯಕರ್ತರ ನೆರವಿಗಾಗಿ ಕಂಟ್ರೊಲ್ ರೂಂ : ಪಕ್ಷದ ಕಾರ್ಯಕರ್ತರಿಗೆ ಯಾವುದೇ ರೀತಿ ಕಿರುಕುಳ ನೀಡುವುದು, ಬೆದರಿಕೆ ಹಾಕಿ ತೊಂದರೆ ನೀಡುವುದು ಮಾಡಿದರೆ ಅಂತಹವರ ವಿರುದ್ಧ ಹೋರಾಡಲು, ಕಾರ್ಯಕರ್ತರನ್ನು ರಕ್ಷಣೆ ಮಾಡಲು ರಾಜ್ಯದ ಎಲ್ಲಾ ಬಿಜೆಪಿ ಕಚೇರಿಗಳಲ್ಲಿ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವಂತೆ ಕಂಟ್ರೊಲ್ ರೂಂ ತರೆಯಲು ಚಿಂತನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…