BREAKING NEWS

ಹೆಣ್ಣುಮಕ್ಕಳ ಬಟ್ಟೆ ಕುರಿತು ಸಲ್ಮಾನ್ ಹೇಳಿಕೆಗೆ ನಟ ಚೇತನ್ ಅಹಿಂಸಾ ಕಿಡಿ

ಬೆಂಗಳೂರು : ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಹೆಣ್ಮಕ್ಕಳ ಬಟ್ಟೆ ವಿಚಾರವಾಗಿ ನೀಡಿರುವ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಲ್ಮಾನ್ ಖಾನ್ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸದ್ದು ಮಾಡುವ ಸಲ್ಮಾನ್ ಖಾನ್ ಇದೀಗ ಮಹಿಳೆರಯ ಬಟ್ಟೆ ವಿಚಾರ ಮಾತಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲವು ದಿನಗಳ ಹಿಂದೆ ನಟಿ ಪಲಕ್​ ತಿವಾರಿ ಶೂಟಿಂಗ್ ಸೆಟ್ ನಲ್ಲಿ ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕಿಕೊಂಡು ಬರಬೇಕು ಎಂದು ಸಲ್ಮಾನ್ ಖಾನ್ ನಿಯಮ ಮಾಡಿದ್ದರು ಎಂದು ಹೇಳಿದ್ದರು. ಆ ಬಗ್ಗೆ ಸ್ವತಃ ಸಲ್ಮಾನ್​ ಖಾನ್​ ಮೌನ ಮುರಿದಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಸಲ್ಮಾನ್ ಖಾನ್ ಮಹಿಳೆಯರು ಮೈ ತುಂಬ ಬಟ್ಟೆ ಧರಿಸಬೇಕು ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ಹೇಳಿಕೆಗೆ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಕಿಡಿ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೇತನ್, ಸಲ್ಮಾನ್ ಖಾನ್ ಮಾತು ಅತ್ಯಂತ ವ್ಯಂಗ್ಯವಾಗಿದೆ ಎಂದು ಹೇಳಿದ್ದಾರೆ. ಅಷ್ಟೆಯಲ್ಲದೇ ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಹಿಳೆಯರ ದೇಹವು ಅಮೂಲ್ಯ, ದೇಹವನ್ನು ಅವರು ಹೆಚ್ಚು ಮುಚ್ಚಿಕೊಂಡಷ್ಟೂ ಒಳ್ಳೆಯದು’ ಎಂದು ಫಿಲ್ಮ್ ಸ್ಟಾರ್ ಸಲ್ಮಾನ್ ಖಾನ್ ಹೇಳಿದ್ದಾರೆ. ಅವರ ಈ ಮಾತು ಅತ್ಯಂತ ವ್ಯಂಗ್ಯವಾಗಿ ಕಾಣುತ್ತಿದೆ. ತನ್ನ ವೈಯಕ್ತಿಕ ದುರ್ವರ್ತನೆಗಳು ಮತ್ತು ಮಹಿಳೆಯರ ದೇಹದೊಂದಿಗೆ ಪ್ರಶ್ನಾರ್ಹ ವಿಧಾನಗಳಿಗೆ ಹೆಸರುವಾಸಿಯಾಗಿರುವ ಸಲ್ಮಾನ್ ಖಾನ್, ಈಗ ಮಹಿಳೆಯರು ಹೇಗೆ ಬಟ್ಟೆ ಧರಿಸಬೇಕು ಎಂಬುದರ ಕುರಿತು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಚೇತನ್ ಕಿಡಿ ಕಾರಿದ್ದಾರೆ.
ಸಲ್ಮಾನ್ ಖಾನ್ ಈ ರೀತಿ ಮಾತನಾಡುವುದರಿಂದ ಅವರ ಅಜ್ಞಾನ, ಬೂಟಾಟಿಕೆ, ಮತ್ತು ಪುರಷಪ್ರಧಾನ ಮನಸ್ಥಿತಿಯು ಹೆಚ್ಚು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಚೇತನ್ ಅಹಿಂಸ ಅಸಮಾಧಾನ ಹೊರಹಾಕಿದ್ದಾರೆ.

ಸಲ್ಮಾನ್ ಖಾನ್ ಹೇಳಿದ್ದೇನು? : ಸಂದರ್ಶನದಲ್ಲಿ ಸಲ್ಮಾನ್ ಖಾನ್, ‘ಮಹಿಳೆಯ ದೇಹ ಪವಿತ್ರವಾದುದು. ಅದನ್ನು ಎಷ್ಟು ಮುಚ್ಚಿಟ್ಟುಕೊಳ್ಳುತ್ತೀರೋ ಅಷ್ಟು ಉತ್ತಮ’ ಎಂದು ಹೇಳಿದ್ದರು. ‘ಸಮಸ್ಯೆ ಇರುವುದು ಹುಡುಗಿಯರಲ್ಲಿ ಅಲ್ಲ. ಸಮಸ್ಯೆ ಇರುವುದು ಹುಡುಗರಲ್ಲಿ. ನಿಮ್ಮ ತಾಯಿ, ತಂಗಿ, ಪತ್ನಿಯನ್ನು ಹುಡುಗರು ಆ ದೃಷ್ಟಿಯಿಂದ ನೋಡುವುದು ನನಗೆ ಇಷ್ಟ ಆಗುವುದಿಲ್ಲ’ ಎಂದು ಸಲ್ಮಾನ್ ಖಾನ್ ಹೇಳಿದ್ದರು.

ನೆಟ್ಟಿಗರ ಆಕ್ರೋಶ : ಸಲ್ಮಾನ್ ಖಾನ್ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ನೆಟ್ಟಿಗರು ಬ್ಯಾಡ್ ಬಾಯ್‌ಯನ್ನು ತರಾಟೆ ತೆಗೆದುಕೊಂಡಿದ್ದಾರೆ. ಹೆಣ್ಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮಹಿಳೆಯ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೆಲ್ಲ ಬೂಟಾಟಿಕೆ ಮಾತುಗಳು ಎಂದು ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಕೆಲವು ನೀವು ಯಾಕೆ ಶರ್ಟ್ ತೆಗೆದುಕೊಂಡು ಓಡಾಡುತ್ತೀರಿ ಎಂದು ಕೇಳಿದ್ದಾರೆ.

lokesh

Recent Posts

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

14 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

25 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

39 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

41 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

44 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

48 mins ago