BREAKING NEWS

ಇಂದಿನಿಂದ ನಟ ಕಿಚ್ಚ ಸುದೀಪ್ ಪ್ರಚಾರ ಶುರು : ಸಿಎಂ ಜೊತೆ ರೋಡ್ ಶೋ ನಲ್ಲಿ ಭಾಗಿ

ಬೆಂಗಳೂರು : ನಟ ಕಿಚ್ಚ ಸುದೀಪ್,​​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು ಇಂದಿನಿಂದ ಮಾಣಿಕ್ಯನ ಮತಬೇಟೆ ಶುರುವಾಗಲಿದೆ. ಹೌದು ಸಿಎಂ ಬೊಮ್ಮಾಯಿಯವರು ಇಂದು ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ನಟ ಸುದೀಪ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆ ನಟ ಸುದೀಪ್​ ಬೆಳಿಗ್ಗೆ 9 ಘಂಟೆಗೆ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ, ಹುಬ್ಬಳ್ಳಿಯಿಂದ ಸ್ಪೆಷಲ್ ಜಟ್​ನಲ್ಲಿ ಶಿಗ್ಗಾಂವಿಗೆ ತಲುಪಲಿದ್ದಾರೆ. ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಸಿಎಂ ಬೊಮ್ಮಾಯಿ ಮತಬೇಟೆ ಮತಯಾಚಿಸಲಿದ್ದಾರೆ. ಇನ್ನು ಸುದೀಪ್ ಮತಬೇಟೆ ಹೇಗಿರುತ್ತೆ ಅನ್ನುವ ಕುತೂಹಲ ಅಭಿಮಾನಿಗಳಿಗೆ ಹೆಚ್ಚಾಗಿದೆ. ಈ ಶಕ್ತಿ ಪ್ರದರ್ಶನದಲ್ಲಿ ಸುಮಾರು 30 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.

ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಾಥ್ ನೀಡಲು ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

 

lokesh

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

49 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

3 hours ago