BREAKING NEWS

ಇಂದಿನಿಂದ ನಟ ಕಿಚ್ಚ ಸುದೀಪ್ ಪ್ರಚಾರ ಶುರು : ಸಿಎಂ ಜೊತೆ ರೋಡ್ ಶೋ ನಲ್ಲಿ ಭಾಗಿ

ಬೆಂಗಳೂರು : ನಟ ಕಿಚ್ಚ ಸುದೀಪ್,​​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು ಇಂದಿನಿಂದ ಮಾಣಿಕ್ಯನ ಮತಬೇಟೆ ಶುರುವಾಗಲಿದೆ. ಹೌದು ಸಿಎಂ ಬೊಮ್ಮಾಯಿಯವರು ಇಂದು ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ನಟ ಸುದೀಪ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆ ನಟ ಸುದೀಪ್​ ಬೆಳಿಗ್ಗೆ 9 ಘಂಟೆಗೆ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ, ಹುಬ್ಬಳ್ಳಿಯಿಂದ ಸ್ಪೆಷಲ್ ಜಟ್​ನಲ್ಲಿ ಶಿಗ್ಗಾಂವಿಗೆ ತಲುಪಲಿದ್ದಾರೆ. ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಸಿಎಂ ಬೊಮ್ಮಾಯಿ ಮತಬೇಟೆ ಮತಯಾಚಿಸಲಿದ್ದಾರೆ. ಇನ್ನು ಸುದೀಪ್ ಮತಬೇಟೆ ಹೇಗಿರುತ್ತೆ ಅನ್ನುವ ಕುತೂಹಲ ಅಭಿಮಾನಿಗಳಿಗೆ ಹೆಚ್ಚಾಗಿದೆ. ಈ ಶಕ್ತಿ ಪ್ರದರ್ಶನದಲ್ಲಿ ಸುಮಾರು 30 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.

ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಾಥ್ ನೀಡಲು ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

 

lokesh

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

16 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

48 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago