BREAKING NEWS

ನಟ ನಾಗಭೂಷಣ್ ಕಾರು ಅಪಘಾತ : ಮಹಿಳೆ ಸಾವು

ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

lokesh

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

4 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

5 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

6 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

7 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

8 hours ago