ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.
ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…