ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.
ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…