BREAKING NEWS

ನಟ ನಾಗಭೂಷಣ್ ಕಾರು ಅಪಘಾತ : ಮಹಿಳೆ ಸಾವು

ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago