ಮೈಸೂರು : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ನಟ ನಿರ್ಮಾಪಕ ಉಪೇಂದ್ರ ಜಾತಿ ಹೆಸೆರನ್ನು ಕರೆದಿರುವುದು ಸಂವಿದಾನಕ್ಕೆ ಮಾಡಿದ ಅಪಚಾರ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪೇಂದ್ರ ಒಬ್ಬ ಖ್ಯಾತ ನಟ, ನಿರ್ಮಾಪಕ ಅವರಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು ಬಹಳ ಇದೆ ಅಂದುಕೊಂಡಿದ್ದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಹೇಳಿದರು.
ನಟ ಉಪೇಂದ್ರ ಇತ್ತೀಚೆಗೆ ಮಾತಿನ ಬರದಲ್ಲಿ ಊರು ಇದ್ದ ಕಡೆ ಹೊಲಗೇರಿ ಇದ್ದೇ ಇರುತ್ತದೆ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿ ದಲಿತ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದ್ದರು.
ಇನ್ನೂ ಮೈಸೂರು ವಿವಿಗೆ ಹಂಗಾಮಿ ಕುಲಪತಿ ನೇಮಕ ಕುರಿತು ಮಾತನಾಡಿದ ಅವರು, ಸರ್ಕಾರ ಕೂಡಲೆ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಲಿದೆ. ಖಾಯಂ ಕುಲಪತಿಗಳ ನೇಮಕ ವಿಚಾರದಲ್ಲಿ ಹಿರಿಯರನ್ನು ಪರಿಗಣಿಸಬೇಕಿದೆ. ಇದನ್ನೆಲ್ಲಾ ಮಾಡಲು ಸಚ್೯ ಕಮಿಟಿ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…