BREAKING NEWS

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನ

ಬೆಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.

ವಿಜಯ್‌ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ್ದರು ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನದ ಶಾಕ್‌ನಿಂದ ಹೊರ ಬಂದಾಗಲೇ ಮತ್ತೊಂದು ಸಾವು ಅವರ ಕುಟುಂಬಕ್ಕೆ ಶಾಕ್‌ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.

ನಾಳೆ ಬೆಂಗಳೂರಿಗೆ ವಿಜಯ್‌ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್‌ ಪೊಲೀಸ್‌ ಆಫೀಸರ್‌ ಬಿ.ಕೆ ಶಿವರಾಮ್‌ ಅವರ ಪುತ್ರಿ ಸ್ಪಂದನ ಅವರು ವಿಜಯ್‌ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

27 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago