BREAKING NEWS

ನಿತ್ಯಾನಂದನ ಕೈಲಾಸ ದೇಶಕ್ಕೆ ಪ್ರಧಾನಿಯಾದ ನಟಿ ರಂಜಿತಾ!

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ  ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ ಅಲ್ಲಿಯೇ ನೆಲೆಯೂರಿದ್ದಾನೆ. ಇದೀಗ ಆ ದೇಶಕ್ಕೆ ಪ್ರಧಾನಿಯನ್ನು ನೇಮಕ ಮಾಡಿದ್ದಾನೆ.

ದೇವರ ಹೆಸರಲ್ಲಿ ಹೊಸ ಸಾಮ್ರಾಜ್ಯ ಕಟ್ಟಿಕೊಂಡಿರುವ ನಿತ್ಯಾನಂದ ಈಕ್ವೆಡಾರ್‌ನ ಕರಾವಳಿಯಲ್ಲಿ ದ್ವೀಪವೊಂದನ್ನು ತನ್ನದೇ ಆದ ದೇಶವಾಗಿ ನಿರ್ಮಿಸಿಕೊಂಡು ತನ್ನ ಶಿಷ್ಯರ ಜೊತೆ ವಾಸಿಸುತ್ತಿದ್ದಾನೆ.

ನಟಿ ರಂಜಿತಾ ಕಾರಣದಿಂದಾಗಿಯೇ ನಿತ್ಯಾನಂದ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದು, ಇಬ್ಬರ ನಡುವಿನ ಖಾಸಗಿ ವಿಡಿಯೋ ವಿಚಾರವಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. ನಂತರ ದೇಶವನ್ನೇ ಬಿಡಬೇಕಾಗಿ ಬಂತು. ದೇಶವನ್ನು ತೊರೆಯುವಾಗ ತನ್ನ ಅಷ್ಟೂ ಶಿಷ್ಯರನ್ನು ಕರೆದೊಯ್ದು, ಹೊಸ ದೇಶ ಕಟ್ಟಿ ಮತ್ತೆ ಅಚ್ಚರಿ ಮೂಡಿಸಿದೆ. ಈ ದೇಶಕ್ಕೆ ರಂಜಿತಾ ಅವರನ್ನು ಪ್ರಧಾನಿ ಮಾಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ.

ತಮ್ಮ ಪ್ರೀತಿಯ ಶಿಷ್ಯೆ ರಂಜಿತಾಳನ್ನು ಕೈಲಾಸದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆ ಮಾಡಲಾಗಿದೆ ಎಂದು ತಮಿಳು ನಿಯತಕಾಲಿಕವೊಂದು ವರದಿ ಮಾಡಿದೆ. ಇದಲ್ಲದೆ, ನಿತ್ಯಾನಂದನ ವೆಬ್‌ಸೈಟ್ ಕೂಡ ಈ ವಿಷಯವನ್ನು ಪ್ರಕಟಿಸಿದೆ ಎನ್ನಲಾಗಿದೆ .

ಈ ಸುದ್ದಿ ಹೊರಬೀಳುತ್ತಿದ್ದಂತೆ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಸದ್ಯಕ್ಕೆ ನಿತ್ಯಾನಂದನ ವೆಬ್‌ಸೈಟ್‌ನಲ್ಲಿ ರಂಜಿತಾ ಮತ್ತು ನಿತ್ಯಾನಂದ ಇರುವ ಫೋಟೋಗಳು ಮಾತ್ರ ಕಾಣಿಸಿಕೊಳ್ಳುತ್ತಿವೆ. ರಂಜಿತಾ ಕೂಡ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದು ನಿತ್ಯಾನಂದಮಯಿ ರಂಜಿತ ಸ್ವತಃ ಸ್ವಾಮಿ ಎಂದು ಘೋಷಿಸಿಕೊಂಡಿದ್ದಾಳೆ.

ಒಟ್ಟಾರೆಯಾಗಿ ಹಿಂದೂಗಳಿಗಾಗಿ ಸ್ಥಾಪಿತವಾದ ಕೈಲಾಸ ರಾಷ್ಟ್ರದ ಮೊದಲ ಪ್ರಧಾನ ಮಂತ್ರಿಯಾಗಿ ರಂಜಿತಾ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ತನ್ನ ದೇಶದ ಕರೆನ್ಸಿಯನ್ನು ನಿತ್ಯಾನಂದ ಬಿಡುಗಡೆ ಮಾಡಿದ್ದ. ತನ್ನ ದೇಶದ ವೀಸಾ ಕೂಡ ಘೋಷಿಸಿದ್ದ. ಕೈಲಾಸ ದೇಶಕ್ಕೆ ಬರುವವರು ಯಾವೆಲ್ಲ ನಿಯಮ ಪಾಲಿಸಬೇಕು ಎನ್ನುವ ಕುರಿತಾದ ವೆಬ್ ಸೈಟ್ ಕೂಡ ನಿತ್ಯಾನಂದ ಮಾಡಿಕೊಂಡಿದ್ದಾನೆ. ಯಾರಿಗೆಲ್ಲ ವೀಸಾ ಕೊಡಲಾಗುತ್ತದೆ ಎನ್ನುವ ವಿವರಣೆಯನ್ನು ಅದರಲ್ಲಿ ನೀಡಿದ್ದಾನೆ. ಇದೀಗ ತನ್ನ ದೇಶಕ್ಕೆ ನಟಿ ರಂಜಿತಾರನ್ನು ಪ್ರಧಾನಿಯನ್ನಾಗಿ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾನೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago