BREAKING NEWS

ನಿತ್ಯಾನಂದನ ಕೈಲಾಸ ದೇಶಕ್ಕೆ ಪ್ರಧಾನಿಯಾದ ನಟಿ ರಂಜಿತಾ!

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ  ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ ಅಲ್ಲಿಯೇ ನೆಲೆಯೂರಿದ್ದಾನೆ. ಇದೀಗ ಆ ದೇಶಕ್ಕೆ ಪ್ರಧಾನಿಯನ್ನು ನೇಮಕ ಮಾಡಿದ್ದಾನೆ.

ದೇವರ ಹೆಸರಲ್ಲಿ ಹೊಸ ಸಾಮ್ರಾಜ್ಯ ಕಟ್ಟಿಕೊಂಡಿರುವ ನಿತ್ಯಾನಂದ ಈಕ್ವೆಡಾರ್‌ನ ಕರಾವಳಿಯಲ್ಲಿ ದ್ವೀಪವೊಂದನ್ನು ತನ್ನದೇ ಆದ ದೇಶವಾಗಿ ನಿರ್ಮಿಸಿಕೊಂಡು ತನ್ನ ಶಿಷ್ಯರ ಜೊತೆ ವಾಸಿಸುತ್ತಿದ್ದಾನೆ.

ನಟಿ ರಂಜಿತಾ ಕಾರಣದಿಂದಾಗಿಯೇ ನಿತ್ಯಾನಂದ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದು, ಇಬ್ಬರ ನಡುವಿನ ಖಾಸಗಿ ವಿಡಿಯೋ ವಿಚಾರವಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. ನಂತರ ದೇಶವನ್ನೇ ಬಿಡಬೇಕಾಗಿ ಬಂತು. ದೇಶವನ್ನು ತೊರೆಯುವಾಗ ತನ್ನ ಅಷ್ಟೂ ಶಿಷ್ಯರನ್ನು ಕರೆದೊಯ್ದು, ಹೊಸ ದೇಶ ಕಟ್ಟಿ ಮತ್ತೆ ಅಚ್ಚರಿ ಮೂಡಿಸಿದೆ. ಈ ದೇಶಕ್ಕೆ ರಂಜಿತಾ ಅವರನ್ನು ಪ್ರಧಾನಿ ಮಾಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ.

ತಮ್ಮ ಪ್ರೀತಿಯ ಶಿಷ್ಯೆ ರಂಜಿತಾಳನ್ನು ಕೈಲಾಸದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆ ಮಾಡಲಾಗಿದೆ ಎಂದು ತಮಿಳು ನಿಯತಕಾಲಿಕವೊಂದು ವರದಿ ಮಾಡಿದೆ. ಇದಲ್ಲದೆ, ನಿತ್ಯಾನಂದನ ವೆಬ್‌ಸೈಟ್ ಕೂಡ ಈ ವಿಷಯವನ್ನು ಪ್ರಕಟಿಸಿದೆ ಎನ್ನಲಾಗಿದೆ .

ಈ ಸುದ್ದಿ ಹೊರಬೀಳುತ್ತಿದ್ದಂತೆ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಸದ್ಯಕ್ಕೆ ನಿತ್ಯಾನಂದನ ವೆಬ್‌ಸೈಟ್‌ನಲ್ಲಿ ರಂಜಿತಾ ಮತ್ತು ನಿತ್ಯಾನಂದ ಇರುವ ಫೋಟೋಗಳು ಮಾತ್ರ ಕಾಣಿಸಿಕೊಳ್ಳುತ್ತಿವೆ. ರಂಜಿತಾ ಕೂಡ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದು ನಿತ್ಯಾನಂದಮಯಿ ರಂಜಿತ ಸ್ವತಃ ಸ್ವಾಮಿ ಎಂದು ಘೋಷಿಸಿಕೊಂಡಿದ್ದಾಳೆ.

ಒಟ್ಟಾರೆಯಾಗಿ ಹಿಂದೂಗಳಿಗಾಗಿ ಸ್ಥಾಪಿತವಾದ ಕೈಲಾಸ ರಾಷ್ಟ್ರದ ಮೊದಲ ಪ್ರಧಾನ ಮಂತ್ರಿಯಾಗಿ ರಂಜಿತಾ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ತನ್ನ ದೇಶದ ಕರೆನ್ಸಿಯನ್ನು ನಿತ್ಯಾನಂದ ಬಿಡುಗಡೆ ಮಾಡಿದ್ದ. ತನ್ನ ದೇಶದ ವೀಸಾ ಕೂಡ ಘೋಷಿಸಿದ್ದ. ಕೈಲಾಸ ದೇಶಕ್ಕೆ ಬರುವವರು ಯಾವೆಲ್ಲ ನಿಯಮ ಪಾಲಿಸಬೇಕು ಎನ್ನುವ ಕುರಿತಾದ ವೆಬ್ ಸೈಟ್ ಕೂಡ ನಿತ್ಯಾನಂದ ಮಾಡಿಕೊಂಡಿದ್ದಾನೆ. ಯಾರಿಗೆಲ್ಲ ವೀಸಾ ಕೊಡಲಾಗುತ್ತದೆ ಎನ್ನುವ ವಿವರಣೆಯನ್ನು ಅದರಲ್ಲಿ ನೀಡಿದ್ದಾನೆ. ಇದೀಗ ತನ್ನ ದೇಶಕ್ಕೆ ನಟಿ ರಂಜಿತಾರನ್ನು ಪ್ರಧಾನಿಯನ್ನಾಗಿ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾನೆ.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

2 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

3 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

3 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

3 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

3 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

3 hours ago