BREAKING NEWS

ಚೀನಾ ಜೊತೆಗೆ ಅದಾನಿ ಸಮೂಹ ಸಂಪರ್ಕ, ಜೆಪಿಸಿ ತನಿಖೆಯೇ ಪರಿಹಾರ: ಕಾಂಗ್ರೆಸ್

ನವದೆಹಲಿ (ಪಿಟಿಐ): ಅದಾನಿ ಸಮೂಹದೊಂದಿಗೆ ಚೀನಾದ ಸಂಪರ್ಕವಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ಈ ಕುರಿತಂತೆ ಜಂಟಿ ಸಂಸದೀಯ ಸಮಿತಿಯ ತನಿಖೆ ನಡೆಸುವುದೇ ಈಗ ಉಳಿದಿರುವ ಪರಿಹಾರ ಎಂದು ಪ್ರತಿಪಾದಿಸಿದೆ.

ಅದಾನಿ ಸಮೂಹದ ಜೊತೆಗೆ ಸಂಪರ್ಕವುಳ್ಳ, ಪ್ರಸ್ತುತ ಪೌರತ್ವ ಕುರಿತು ವಿವಾದವಿರುವ ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ ನಿರ್ದೇಶಕ ಮಾರಿಸ್‌ ಚಾಂಗ್ ಅವರು, ‘ತಾನು ತೈವಾನ್‌ ಪ್ರಜೆ’ ಎಂದು ಹೇಳಿಕೊಂಡಿರುವುದರ ಹಿಂದೆಯೇ ಕಾಂಗ್ರೆಸ್‌ ಪಕ್ಷವು ಜೆಪಿಸಿ ತನಿಖೆ ಅಗತ್ಯವನ್ನು ಪುನರುಚ್ಚರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು, ‘ಪಿಎಂಸಿ ಪ್ರಾಜೆಕ್ಟ್ಸ್‌ ಮಾಲೀಕತ್ವ ಚಾಂಗ್‌ ಪುತ್ರನದು ಎಂದು ನಾವು ಉಲ್ಲೇಖಿಸಿದ್ದೇವೆ. ಕಂದಾಯ ಗುಪ್ತದಳ ನಿರ್ದೇಶನಾಲಯವು ಇದೇ ಕಂಪನಿಯು ₹ 5,500 ಕೋಟಿ ಮೌಲ್ಯದ ಇಂಧನ ಖರೀದಿ ಹಗರಣದಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿದೆ. ಈ ಎಲ್ಲದರ ಬಗ್ಗೆಯೂ ಜೆಪಿಸಿ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

ಪಾಸ್‌ಪೋರ್ಟ್‌ ಆಧರಿಸಿ ಚಾಂಗ್ ಚೀನಾದ ಪ್ರಜೆ ಎಂದು ಹೇಳಲಾಗಿತ್ತು. ಇವರು ಗೌತಮ್‌ ಅದಾನಿ ಅವರ ಮಾಲೀಕತ್ವದ ಬಂದರು–ಇಂಧನ ಉದ್ಯಮಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯು ಅದಾನಿ ಸಮೂಹದ ಪರವಾಗಿ ಬಂದರು, ಟರ್ಮಿನಲ್ಸ್‌, ರೈಲು ಮಾರ್ಗ, ವಿದ್ಯುತ್ ಪೂರೈಕೆ ಮಾರ್ಗ ಮತ್ತು ಇತರೆ ಮೂಲಸೌಕರ್ಯ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುತ್ತಿದೆ.

ಚಾಂಗ್‌ ಅವರ ಪುತ್ರ ಚಾಂಗ್ ಚೀನ್‌ ಟಿಂಗ್ (ಮಾರಿಸ್‌ ಚಾಂಗ್), ತಾನು ತೈವಾನ್‌ ಪಾಸ್‌ಪೋರ್ಟ್ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಜೈರಾಂ ರಮೇಶ್‌ ಅವರು ಉಲ್ಲೇಖಿಸಿದ್ದಾರೆ.

andolanait

Recent Posts

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

23 mins ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

34 mins ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

10 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

13 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

14 hours ago