BREAKING NEWS

ಚೀನಾ ಜೊತೆಗೆ ಅದಾನಿ ಸಮೂಹ ಸಂಪರ್ಕ, ಜೆಪಿಸಿ ತನಿಖೆಯೇ ಪರಿಹಾರ: ಕಾಂಗ್ರೆಸ್

ನವದೆಹಲಿ (ಪಿಟಿಐ): ಅದಾನಿ ಸಮೂಹದೊಂದಿಗೆ ಚೀನಾದ ಸಂಪರ್ಕವಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ಈ ಕುರಿತಂತೆ ಜಂಟಿ ಸಂಸದೀಯ ಸಮಿತಿಯ ತನಿಖೆ ನಡೆಸುವುದೇ ಈಗ ಉಳಿದಿರುವ ಪರಿಹಾರ ಎಂದು ಪ್ರತಿಪಾದಿಸಿದೆ.

ಅದಾನಿ ಸಮೂಹದ ಜೊತೆಗೆ ಸಂಪರ್ಕವುಳ್ಳ, ಪ್ರಸ್ತುತ ಪೌರತ್ವ ಕುರಿತು ವಿವಾದವಿರುವ ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ ನಿರ್ದೇಶಕ ಮಾರಿಸ್‌ ಚಾಂಗ್ ಅವರು, ‘ತಾನು ತೈವಾನ್‌ ಪ್ರಜೆ’ ಎಂದು ಹೇಳಿಕೊಂಡಿರುವುದರ ಹಿಂದೆಯೇ ಕಾಂಗ್ರೆಸ್‌ ಪಕ್ಷವು ಜೆಪಿಸಿ ತನಿಖೆ ಅಗತ್ಯವನ್ನು ಪುನರುಚ್ಚರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು, ‘ಪಿಎಂಸಿ ಪ್ರಾಜೆಕ್ಟ್ಸ್‌ ಮಾಲೀಕತ್ವ ಚಾಂಗ್‌ ಪುತ್ರನದು ಎಂದು ನಾವು ಉಲ್ಲೇಖಿಸಿದ್ದೇವೆ. ಕಂದಾಯ ಗುಪ್ತದಳ ನಿರ್ದೇಶನಾಲಯವು ಇದೇ ಕಂಪನಿಯು ₹ 5,500 ಕೋಟಿ ಮೌಲ್ಯದ ಇಂಧನ ಖರೀದಿ ಹಗರಣದಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿದೆ. ಈ ಎಲ್ಲದರ ಬಗ್ಗೆಯೂ ಜೆಪಿಸಿ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

ಪಾಸ್‌ಪೋರ್ಟ್‌ ಆಧರಿಸಿ ಚಾಂಗ್ ಚೀನಾದ ಪ್ರಜೆ ಎಂದು ಹೇಳಲಾಗಿತ್ತು. ಇವರು ಗೌತಮ್‌ ಅದಾನಿ ಅವರ ಮಾಲೀಕತ್ವದ ಬಂದರು–ಇಂಧನ ಉದ್ಯಮಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯು ಅದಾನಿ ಸಮೂಹದ ಪರವಾಗಿ ಬಂದರು, ಟರ್ಮಿನಲ್ಸ್‌, ರೈಲು ಮಾರ್ಗ, ವಿದ್ಯುತ್ ಪೂರೈಕೆ ಮಾರ್ಗ ಮತ್ತು ಇತರೆ ಮೂಲಸೌಕರ್ಯ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುತ್ತಿದೆ.

ಚಾಂಗ್‌ ಅವರ ಪುತ್ರ ಚಾಂಗ್ ಚೀನ್‌ ಟಿಂಗ್ (ಮಾರಿಸ್‌ ಚಾಂಗ್), ತಾನು ತೈವಾನ್‌ ಪಾಸ್‌ಪೋರ್ಟ್ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಜೈರಾಂ ರಮೇಶ್‌ ಅವರು ಉಲ್ಲೇಖಿಸಿದ್ದಾರೆ.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

22 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

42 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

2 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

5 hours ago