BREAKING NEWS

ಚೀನಾ ಜೊತೆಗೆ ಅದಾನಿ ಸಮೂಹ ಸಂಪರ್ಕ, ಜೆಪಿಸಿ ತನಿಖೆಯೇ ಪರಿಹಾರ: ಕಾಂಗ್ರೆಸ್

ನವದೆಹಲಿ (ಪಿಟಿಐ): ಅದಾನಿ ಸಮೂಹದೊಂದಿಗೆ ಚೀನಾದ ಸಂಪರ್ಕವಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ಈ ಕುರಿತಂತೆ ಜಂಟಿ ಸಂಸದೀಯ ಸಮಿತಿಯ ತನಿಖೆ ನಡೆಸುವುದೇ ಈಗ ಉಳಿದಿರುವ ಪರಿಹಾರ ಎಂದು ಪ್ರತಿಪಾದಿಸಿದೆ.

ಅದಾನಿ ಸಮೂಹದ ಜೊತೆಗೆ ಸಂಪರ್ಕವುಳ್ಳ, ಪ್ರಸ್ತುತ ಪೌರತ್ವ ಕುರಿತು ವಿವಾದವಿರುವ ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ ನಿರ್ದೇಶಕ ಮಾರಿಸ್‌ ಚಾಂಗ್ ಅವರು, ‘ತಾನು ತೈವಾನ್‌ ಪ್ರಜೆ’ ಎಂದು ಹೇಳಿಕೊಂಡಿರುವುದರ ಹಿಂದೆಯೇ ಕಾಂಗ್ರೆಸ್‌ ಪಕ್ಷವು ಜೆಪಿಸಿ ತನಿಖೆ ಅಗತ್ಯವನ್ನು ಪುನರುಚ್ಚರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು, ‘ಪಿಎಂಸಿ ಪ್ರಾಜೆಕ್ಟ್ಸ್‌ ಮಾಲೀಕತ್ವ ಚಾಂಗ್‌ ಪುತ್ರನದು ಎಂದು ನಾವು ಉಲ್ಲೇಖಿಸಿದ್ದೇವೆ. ಕಂದಾಯ ಗುಪ್ತದಳ ನಿರ್ದೇಶನಾಲಯವು ಇದೇ ಕಂಪನಿಯು ₹ 5,500 ಕೋಟಿ ಮೌಲ್ಯದ ಇಂಧನ ಖರೀದಿ ಹಗರಣದಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿದೆ. ಈ ಎಲ್ಲದರ ಬಗ್ಗೆಯೂ ಜೆಪಿಸಿ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

ಪಾಸ್‌ಪೋರ್ಟ್‌ ಆಧರಿಸಿ ಚಾಂಗ್ ಚೀನಾದ ಪ್ರಜೆ ಎಂದು ಹೇಳಲಾಗಿತ್ತು. ಇವರು ಗೌತಮ್‌ ಅದಾನಿ ಅವರ ಮಾಲೀಕತ್ವದ ಬಂದರು–ಇಂಧನ ಉದ್ಯಮಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯು ಅದಾನಿ ಸಮೂಹದ ಪರವಾಗಿ ಬಂದರು, ಟರ್ಮಿನಲ್ಸ್‌, ರೈಲು ಮಾರ್ಗ, ವಿದ್ಯುತ್ ಪೂರೈಕೆ ಮಾರ್ಗ ಮತ್ತು ಇತರೆ ಮೂಲಸೌಕರ್ಯ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುತ್ತಿದೆ.

ಚಾಂಗ್‌ ಅವರ ಪುತ್ರ ಚಾಂಗ್ ಚೀನ್‌ ಟಿಂಗ್ (ಮಾರಿಸ್‌ ಚಾಂಗ್), ತಾನು ತೈವಾನ್‌ ಪಾಸ್‌ಪೋರ್ಟ್ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಜೈರಾಂ ರಮೇಶ್‌ ಅವರು ಉಲ್ಲೇಖಿಸಿದ್ದಾರೆ.

andolanait

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

2 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

3 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

5 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

6 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

9 hours ago