BREAKING NEWS

ಚೀನಾ ಜೊತೆಗೆ ಅದಾನಿ ಸಮೂಹ ಸಂಪರ್ಕ, ಜೆಪಿಸಿ ತನಿಖೆಯೇ ಪರಿಹಾರ: ಕಾಂಗ್ರೆಸ್

ನವದೆಹಲಿ (ಪಿಟಿಐ): ಅದಾನಿ ಸಮೂಹದೊಂದಿಗೆ ಚೀನಾದ ಸಂಪರ್ಕವಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ಈ ಕುರಿತಂತೆ ಜಂಟಿ ಸಂಸದೀಯ ಸಮಿತಿಯ ತನಿಖೆ ನಡೆಸುವುದೇ ಈಗ ಉಳಿದಿರುವ ಪರಿಹಾರ ಎಂದು ಪ್ರತಿಪಾದಿಸಿದೆ.

ಅದಾನಿ ಸಮೂಹದ ಜೊತೆಗೆ ಸಂಪರ್ಕವುಳ್ಳ, ಪ್ರಸ್ತುತ ಪೌರತ್ವ ಕುರಿತು ವಿವಾದವಿರುವ ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ ನಿರ್ದೇಶಕ ಮಾರಿಸ್‌ ಚಾಂಗ್ ಅವರು, ‘ತಾನು ತೈವಾನ್‌ ಪ್ರಜೆ’ ಎಂದು ಹೇಳಿಕೊಂಡಿರುವುದರ ಹಿಂದೆಯೇ ಕಾಂಗ್ರೆಸ್‌ ಪಕ್ಷವು ಜೆಪಿಸಿ ತನಿಖೆ ಅಗತ್ಯವನ್ನು ಪುನರುಚ್ಚರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು, ‘ಪಿಎಂಸಿ ಪ್ರಾಜೆಕ್ಟ್ಸ್‌ ಮಾಲೀಕತ್ವ ಚಾಂಗ್‌ ಪುತ್ರನದು ಎಂದು ನಾವು ಉಲ್ಲೇಖಿಸಿದ್ದೇವೆ. ಕಂದಾಯ ಗುಪ್ತದಳ ನಿರ್ದೇಶನಾಲಯವು ಇದೇ ಕಂಪನಿಯು ₹ 5,500 ಕೋಟಿ ಮೌಲ್ಯದ ಇಂಧನ ಖರೀದಿ ಹಗರಣದಲ್ಲಿ ಭಾಗಿಯಾಗಿರುವುದನ್ನು ಉಲ್ಲೇಖಿಸಿದೆ. ಈ ಎಲ್ಲದರ ಬಗ್ಗೆಯೂ ಜೆಪಿಸಿ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

ಪಾಸ್‌ಪೋರ್ಟ್‌ ಆಧರಿಸಿ ಚಾಂಗ್ ಚೀನಾದ ಪ್ರಜೆ ಎಂದು ಹೇಳಲಾಗಿತ್ತು. ಇವರು ಗೌತಮ್‌ ಅದಾನಿ ಅವರ ಮಾಲೀಕತ್ವದ ಬಂದರು–ಇಂಧನ ಉದ್ಯಮಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ. ಪಿಎಂಸಿ ಪ್ರಾಜೆಕ್ಟ್ಸ್‌ (ಇಂಡಿಯಾ) ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯು ಅದಾನಿ ಸಮೂಹದ ಪರವಾಗಿ ಬಂದರು, ಟರ್ಮಿನಲ್ಸ್‌, ರೈಲು ಮಾರ್ಗ, ವಿದ್ಯುತ್ ಪೂರೈಕೆ ಮಾರ್ಗ ಮತ್ತು ಇತರೆ ಮೂಲಸೌಕರ್ಯ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುತ್ತಿದೆ.

ಚಾಂಗ್‌ ಅವರ ಪುತ್ರ ಚಾಂಗ್ ಚೀನ್‌ ಟಿಂಗ್ (ಮಾರಿಸ್‌ ಚಾಂಗ್), ತಾನು ತೈವಾನ್‌ ಪಾಸ್‌ಪೋರ್ಟ್ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಜೈರಾಂ ರಮೇಶ್‌ ಅವರು ಉಲ್ಲೇಖಿಸಿದ್ದಾರೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

1 hour ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

3 hours ago