ಮುಂಬೈ : ಅದಾನಿ ಸಮೂಹದ ವಿರುದ್ಧ ಹಿಂಡನ್ಬರ್ಗ್ ಮಾಡಿರುವ ಆರೋಪ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಮಂಡಳಿ (ಜೆಪಿಸಿ) ರಚಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿರುವುದರ ನಡುವೆಯೇ ‘ಅದಾನಿ ಸಮೂಹ‘ದ ಅಧ್ಯಕ್ಷ ಗೌತಮ್ ಅದಾನಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.
ದಕ್ಷಿಣ ಮುಂಬೈನಲ್ಲಿರುವ ಶರದ್ ಪವಾರ್ ನಿವಾಸಕ್ಕೆ ಭೇಟಿ ನೀಡಿದ ಗೌತಮ್ ಅದಾನಿ ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ನಡೆದ ಸಂದರ್ಶನವೊಂದರಲ್ಲಿ ಶರದ್ ಪವಾರ್ ಅದಾನಿ ಪರ ಮಾತನಾಡಿದ್ದರು. ಹಿಂಡನ್ಬರ್ಗ್ ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪವಾರ್, ‘ಒಬ್ಬ ವ್ಯಕ್ತಿಯನ್ನು ಗುರಿ ಮಾಡಿಕೊಂಡು ವರದಿ ಬಿಡುಗಡೆ ಮಾಡಿದ ಹಾಗಿದೆ‘ ಎಂದು ಹೇಳಿದ್ದರು. ಶರದ್ ಹೇಳಿಕೆಯನ್ನು ಬಿಜೆಪಿ ಬೆಂಬಲಿಸಿದರೆ, ವಿರೋಧ ಪಕ್ಷಗಳು ಗೊಂದಲಕ್ಕೊಳಗಾಗಿದ್ದವು.
‘ಅದಾನಿ ಗ್ರೂಪ್ ಮೇಲಿರುವ ತನಿಖೆಯನ್ನು ಸಂಸದೀಯ ಮಂಡಳಿಗೆ ವಹಿಸುವುದಕ್ಕಿಂತ ಸುಪ್ರೀಂಕೋರ್ಟ್ನ ಸಮಿತಿಗೆ ವಹಿಸುವುದು ಸೂಕ್ತ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಸಂಸತ್ತಿನ ಜಂಟಿ ಸಂಸದೀಯ ಮಂಡಳಿಯಲ್ಲಿರುವ ಹೆಚ್ಚಿನವರು ಬಿಜೆಪಿಯವರೇ ಆಗಿದ್ದಾರೆ. ಆದ್ದರಿಂದ ಸಂಸದೀಯ ಮಂಡಳಿ ತನಿಖೆ ನಡೆಸಿದರೆ ಅನುಮಾನಗಳು ಬರುವ ಸಾಧ್ಯತೆಯಿರುತ್ತದೆ. ಸುಪ್ರೀಂಕೋರ್ಟ್ ಸಮಿತಿ ತನಿಖೆ ನಡೆಸುವುದೇ ಸೂಕ್ತ‘ ಎಂದು ಪವಾರ್ ಹೇಳಿದ್ದರು.
ಅದಾನಿ ಸಮೂಹದ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಗಳಿಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆರು ಸದಸ್ಯ ಸಮಿತಿಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಕಳೆದ ತಿಂಗಳು ಆದೇಶಿಸಿತ್ತು.
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…