BREAKING NEWS

ಅದಾನಿ Vs ಹಿಂಡನ್‌ಬರ್ಗ್‌: ಶರದ್‌ ಪವಾರ್‌ ಭೇಟಿ ಮಾಡಿದ ಗೌತಮ್‌ ಅದಾನಿ

ಮುಂಬೈ : ಅದಾನಿ ಸಮೂಹದ ವಿರುದ್ಧ ಹಿಂಡನ್‌ಬರ್ಗ್‌ ಮಾಡಿರುವ ಆರೋಪ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಮಂಡಳಿ (ಜೆಪಿಸಿ) ರಚಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿರುವುದರ ನಡುವೆಯೇ ‘ಅದಾನಿ ಸಮೂಹ‘ದ ಅಧ್ಯಕ್ಷ ಗೌತಮ್‌ ಅದಾನಿ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ನಾಯಕ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಶರದ್‌ ಪವಾರ್‌ ನಿವಾಸಕ್ಕೆ ಭೇಟಿ ನೀಡಿದ ಗೌತಮ್‌ ಅದಾನಿ ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ನಡೆದ ಸಂದರ್ಶನವೊಂದರಲ್ಲಿ ಶರದ್‌ ಪವಾರ್‌ ಅದಾನಿ ಪರ ಮಾತನಾಡಿದ್ದರು. ಹಿಂಡನ್‌ಬರ್ಗ್‌ ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪವಾರ್‌, ‘ಒಬ್ಬ ವ್ಯಕ್ತಿಯನ್ನು ಗುರಿ ಮಾಡಿಕೊಂಡು ವರದಿ ಬಿಡುಗಡೆ ಮಾಡಿದ ಹಾಗಿದೆ‘ ಎಂದು ಹೇಳಿದ್ದರು. ಶರದ್‌ ಹೇಳಿಕೆಯನ್ನು ಬಿಜೆಪಿ ಬೆಂಬಲಿಸಿದರೆ, ವಿರೋಧ ಪಕ್ಷಗಳು ಗೊಂದಲಕ್ಕೊಳಗಾಗಿದ್ದವು.

‘ಅದಾನಿ ಗ್ರೂಪ್‌ ಮೇಲಿರುವ ತನಿಖೆಯನ್ನು ಸಂಸದೀಯ ಮಂಡಳಿಗೆ ವಹಿಸುವುದಕ್ಕಿಂತ ಸುಪ್ರೀಂಕೋರ್ಟ್‌ನ ಸಮಿತಿಗೆ ವಹಿಸುವುದು ಸೂಕ್ತ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಸಂಸತ್ತಿನ ಜಂಟಿ ಸಂಸದೀಯ ಮಂಡಳಿಯಲ್ಲಿರುವ ಹೆಚ್ಚಿನವರು ಬಿಜೆಪಿಯವರೇ ಆಗಿದ್ದಾರೆ. ಆದ್ದರಿಂದ ಸಂಸದೀಯ ಮಂಡಳಿ ತನಿಖೆ ನಡೆಸಿದರೆ ಅನುಮಾನಗಳು ಬರುವ ಸಾಧ್ಯತೆಯಿರುತ್ತದೆ. ಸುಪ್ರೀಂಕೋರ್ಟ್‌ ಸಮಿತಿ ತನಿಖೆ ನಡೆಸುವುದೇ ಸೂಕ್ತ‘ ಎಂದು ಪವಾರ್‌ ಹೇಳಿದ್ದರು.

ಅದಾನಿ ಸಮೂಹದ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಗಳಿಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆರು ಸದಸ್ಯ ಸಮಿತಿಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಕಳೆದ ತಿಂಗಳು ಆದೇಶಿಸಿತ್ತು.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

4 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

4 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

4 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

13 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago