BREAKING NEWS

ಅದಾನಿ Vs ಹಿಂಡನ್‌ಬರ್ಗ್‌: ಶರದ್‌ ಪವಾರ್‌ ಭೇಟಿ ಮಾಡಿದ ಗೌತಮ್‌ ಅದಾನಿ

ಮುಂಬೈ : ಅದಾನಿ ಸಮೂಹದ ವಿರುದ್ಧ ಹಿಂಡನ್‌ಬರ್ಗ್‌ ಮಾಡಿರುವ ಆರೋಪ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಮಂಡಳಿ (ಜೆಪಿಸಿ) ರಚಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿರುವುದರ ನಡುವೆಯೇ ‘ಅದಾನಿ ಸಮೂಹ‘ದ ಅಧ್ಯಕ್ಷ ಗೌತಮ್‌ ಅದಾನಿ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ನಾಯಕ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಶರದ್‌ ಪವಾರ್‌ ನಿವಾಸಕ್ಕೆ ಭೇಟಿ ನೀಡಿದ ಗೌತಮ್‌ ಅದಾನಿ ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ನಡೆದ ಸಂದರ್ಶನವೊಂದರಲ್ಲಿ ಶರದ್‌ ಪವಾರ್‌ ಅದಾನಿ ಪರ ಮಾತನಾಡಿದ್ದರು. ಹಿಂಡನ್‌ಬರ್ಗ್‌ ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪವಾರ್‌, ‘ಒಬ್ಬ ವ್ಯಕ್ತಿಯನ್ನು ಗುರಿ ಮಾಡಿಕೊಂಡು ವರದಿ ಬಿಡುಗಡೆ ಮಾಡಿದ ಹಾಗಿದೆ‘ ಎಂದು ಹೇಳಿದ್ದರು. ಶರದ್‌ ಹೇಳಿಕೆಯನ್ನು ಬಿಜೆಪಿ ಬೆಂಬಲಿಸಿದರೆ, ವಿರೋಧ ಪಕ್ಷಗಳು ಗೊಂದಲಕ್ಕೊಳಗಾಗಿದ್ದವು.

‘ಅದಾನಿ ಗ್ರೂಪ್‌ ಮೇಲಿರುವ ತನಿಖೆಯನ್ನು ಸಂಸದೀಯ ಮಂಡಳಿಗೆ ವಹಿಸುವುದಕ್ಕಿಂತ ಸುಪ್ರೀಂಕೋರ್ಟ್‌ನ ಸಮಿತಿಗೆ ವಹಿಸುವುದು ಸೂಕ್ತ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಸಂಸತ್ತಿನ ಜಂಟಿ ಸಂಸದೀಯ ಮಂಡಳಿಯಲ್ಲಿರುವ ಹೆಚ್ಚಿನವರು ಬಿಜೆಪಿಯವರೇ ಆಗಿದ್ದಾರೆ. ಆದ್ದರಿಂದ ಸಂಸದೀಯ ಮಂಡಳಿ ತನಿಖೆ ನಡೆಸಿದರೆ ಅನುಮಾನಗಳು ಬರುವ ಸಾಧ್ಯತೆಯಿರುತ್ತದೆ. ಸುಪ್ರೀಂಕೋರ್ಟ್‌ ಸಮಿತಿ ತನಿಖೆ ನಡೆಸುವುದೇ ಸೂಕ್ತ‘ ಎಂದು ಪವಾರ್‌ ಹೇಳಿದ್ದರು.

ಅದಾನಿ ಸಮೂಹದ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಗಳಿಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆರು ಸದಸ್ಯ ಸಮಿತಿಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಕಳೆದ ತಿಂಗಳು ಆದೇಶಿಸಿತ್ತು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago