BREAKING NEWS

ಅದಾನಿ Vs ಹಿಂಡನ್‌ಬರ್ಗ್‌: ಶರದ್‌ ಪವಾರ್‌ ಭೇಟಿ ಮಾಡಿದ ಗೌತಮ್‌ ಅದಾನಿ

ಮುಂಬೈ : ಅದಾನಿ ಸಮೂಹದ ವಿರುದ್ಧ ಹಿಂಡನ್‌ಬರ್ಗ್‌ ಮಾಡಿರುವ ಆರೋಪ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಮಂಡಳಿ (ಜೆಪಿಸಿ) ರಚಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿರುವುದರ ನಡುವೆಯೇ ‘ಅದಾನಿ ಸಮೂಹ‘ದ ಅಧ್ಯಕ್ಷ ಗೌತಮ್‌ ಅದಾನಿ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ನಾಯಕ ಶರದ್‌ ಪವಾರ್‌ ಅವರನ್ನು ಭೇಟಿ ಮಾಡಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಶರದ್‌ ಪವಾರ್‌ ನಿವಾಸಕ್ಕೆ ಭೇಟಿ ನೀಡಿದ ಗೌತಮ್‌ ಅದಾನಿ ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ನಡೆದ ಸಂದರ್ಶನವೊಂದರಲ್ಲಿ ಶರದ್‌ ಪವಾರ್‌ ಅದಾನಿ ಪರ ಮಾತನಾಡಿದ್ದರು. ಹಿಂಡನ್‌ಬರ್ಗ್‌ ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪವಾರ್‌, ‘ಒಬ್ಬ ವ್ಯಕ್ತಿಯನ್ನು ಗುರಿ ಮಾಡಿಕೊಂಡು ವರದಿ ಬಿಡುಗಡೆ ಮಾಡಿದ ಹಾಗಿದೆ‘ ಎಂದು ಹೇಳಿದ್ದರು. ಶರದ್‌ ಹೇಳಿಕೆಯನ್ನು ಬಿಜೆಪಿ ಬೆಂಬಲಿಸಿದರೆ, ವಿರೋಧ ಪಕ್ಷಗಳು ಗೊಂದಲಕ್ಕೊಳಗಾಗಿದ್ದವು.

‘ಅದಾನಿ ಗ್ರೂಪ್‌ ಮೇಲಿರುವ ತನಿಖೆಯನ್ನು ಸಂಸದೀಯ ಮಂಡಳಿಗೆ ವಹಿಸುವುದಕ್ಕಿಂತ ಸುಪ್ರೀಂಕೋರ್ಟ್‌ನ ಸಮಿತಿಗೆ ವಹಿಸುವುದು ಸೂಕ್ತ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಸಂಸತ್ತಿನ ಜಂಟಿ ಸಂಸದೀಯ ಮಂಡಳಿಯಲ್ಲಿರುವ ಹೆಚ್ಚಿನವರು ಬಿಜೆಪಿಯವರೇ ಆಗಿದ್ದಾರೆ. ಆದ್ದರಿಂದ ಸಂಸದೀಯ ಮಂಡಳಿ ತನಿಖೆ ನಡೆಸಿದರೆ ಅನುಮಾನಗಳು ಬರುವ ಸಾಧ್ಯತೆಯಿರುತ್ತದೆ. ಸುಪ್ರೀಂಕೋರ್ಟ್‌ ಸಮಿತಿ ತನಿಖೆ ನಡೆಸುವುದೇ ಸೂಕ್ತ‘ ಎಂದು ಪವಾರ್‌ ಹೇಳಿದ್ದರು.

ಅದಾನಿ ಸಮೂಹದ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಗಳಿಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆರು ಸದಸ್ಯ ಸಮಿತಿಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಕಳೆದ ತಿಂಗಳು ಆದೇಶಿಸಿತ್ತು.

andolanait

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

28 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago