BREAKING NEWS

ವಿದ್ಯುತ್ ದುಬಾರಿ ಹಿಂದೆ ಅದಾನಿ ಕೈವಾಡವಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತ್ತೊಮ್ಮೆ ಅದಾನಿ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ವಿದ್ಯುತ್ ದುಬಾರಿಯಾಗುತ್ತಿರುವ ಹಿಂದೆ ಅದಾನಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ಅವರಿಂದಾಗಿಯೇ ವಿದ್ಯುತ್ ದುಬಾರಿಯಾಗುತ್ತಿದೆ. ವಿದ್ಯುತ್ ದರದಲ್ಲಿ ಜನರಿಗೆ 12,000 ಕೋಟಿ ರೂಪಾಯಿಗಳಷ್ಟು ವಂಚಿಸಿದೆ ಎಂದು ಹೇಳಿದ್ದಾರೆ.

ಅದಾನಿ ಜಿ ಇಂಡೋನೇಷ್ಯಾದಲ್ಲಿ ಕಲ್ಲಿದ್ದಲು ಖರೀದಿಸುತ್ತಾರೆ. ಭಾರತಕ್ಕೆ ಬರುವ ಹೊತ್ತಿಗೆ ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಅವರು ಕಲ್ಲಿದ್ದಲಿನ ಬೆಲೆಯನ್ನು ಅತಿಯಾಗಿ ಇನ್‌ವಾಯ್ಸ್ ಮಾಡಿದ್ದಾರೆ. ಇದು ದೇಶದಲ್ಲಿನ ವಿದ್ಯುತ್ ದರಗಳ ಮೇಲೆ ಪರಿಣಾಮ ಬೀರುತ್ತಿದೆ. ಜನರು ಹೆಚ್ಚಿನ ವಿದ್ಯುತ್ ದರಗಳನ್ನು ಪಾವತಿ ಮಾಡುವಂತಾಗಿದೆ. ಆದರೆ, ಅವರ ವಿರುದ್ಧ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಅದಾನಿಗೆ ಸರ್ಕಾರದ ಸಂಪೂರ್ಣ ರಕ್ಷಣೆ ಇದೆ. ಅವರ ಹಿಂದಿರುವುದು ಯಾವ ಶಕ್ತಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೌನವನ್ನು ರಾಹುಲ್ ಗಾಂಧಿಯವರು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿಯವರು ಈ ವಿಚಾರ ಕುರಿತು ತನಿಖೆ ನಡೆಸಬೇಕು. ಈ ಕುರಿತು ಸ್ಪಷ್ಟತೆಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ಪ್ರಧಾನಿ ಮೋದಿಯವರು ಮೌನ ತಾಳಿರುವುದೇಕೆ? ತನಿಖೆಗೆ ಆದೇಶಿಸಿ, ವಿಶ್ವಾಸಾರ್ಹತೆ ಉಳಿಸಿಕೊಳ್ಳುವಂತೆ ಆಗ್ರಹಿಸಿ ನಾನು ಮೋದಿಯವರಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಹೇಳಿದರು.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

10 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

11 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

21 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

21 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago