ನವದೆಹಲಿ : ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.
ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಸೂರ್ಯನನ್ನು ಅಧ್ಯಯನ ಮಾಡುವ ಇಸ್ರೋದ ಮಹತ್ವಾಕಾಂಕ್ಷೆಯ ಮಿಷನ್ ಸೆಪ್ಟೆಂಬರ್ 2 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು.
ಬಾಹ್ಯಾಕಾಶ ನೌಕೆಯು 125 ದಿನಗಳ ನಂತರ ಎಲ್1 ಪಾಯಿಂಟ್ನಲ್ಲಿ ಉದ್ದೇಶಿತ ಕಕ್ಷೆಗೆ ಆಗಮಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಆದಿತ್ಯ-ಎಲ್1 ಉಪಗ್ರಹ ಭೂಮಿ ಮತ್ತು ಚಂದ್ರನ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿತ್ತು.
ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್-1 ಪಾಯಿಂಟ್ನಿಂದ ಸೂರ್ಯನನ್ನು ಅಧ್ಯಯನ ನಡೆಸಲಿದೆ. ಇಸ್ರೋ ಪ್ರಕಾರ, ಎಲ್1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಬಾಹ್ಯಾಕಾಶ ನೌಕೆಯು ಯಾವುದೇ ಗ್ರಹಣಗಳಿಲ್ಲದೆ ಸೂರ್ಯನನ್ನು ನಿರಂತರವಾಗಿ ವೀಕ್ಷಿಸುವ ಪ್ರಯೋಜನವನ್ನು ಹೊಂದಿದೆ. ಇದು ಸೌರ ಚಟುವಟಿಕೆಗಳನ್ನು ವೀಕ್ಷಿಸಲು ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…