BREAKING NEWS

ಆದಿತ್ಯ ಎಲ್‌1 : ಸೂರ್ಯನಿಗೆ ಇನ್ನಷ್ಟು ಹತ್ತಿರವಾದ ನೌಕೆ

ನವದೆಹಲಿ : ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್‌1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.

ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ಸೂರ್ಯನನ್ನು ಅಧ್ಯಯನ ಮಾಡುವ ಇಸ್ರೋದ ಮಹತ್ವಾಕಾಂಕ್ಷೆಯ ಮಿಷನ್ ಸೆಪ್ಟೆಂಬರ್ 2 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು.

ಬಾಹ್ಯಾಕಾಶ ನೌಕೆಯು 125 ದಿನಗಳ ನಂತರ ಎಲ್1 ಪಾಯಿಂಟ್‌ನಲ್ಲಿ ಉದ್ದೇಶಿತ ಕಕ್ಷೆಗೆ ಆಗಮಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಆದಿತ್ಯ-ಎಲ್1 ಉಪಗ್ರಹ ಭೂಮಿ ಮತ್ತು ಚಂದ್ರನ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿತ್ತು.

ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್-1 ಪಾಯಿಂಟ್‌ನಿಂದ ಸೂರ್ಯನನ್ನು ಅಧ್ಯಯನ ನಡೆಸಲಿದೆ. ಇಸ್ರೋ ಪ್ರಕಾರ, ಎಲ್1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಬಾಹ್ಯಾಕಾಶ ನೌಕೆಯು ಯಾವುದೇ ಗ್ರಹಣಗಳಿಲ್ಲದೆ ಸೂರ್ಯನನ್ನು ನಿರಂತರವಾಗಿ ವೀಕ್ಷಿಸುವ ಪ್ರಯೋಜನವನ್ನು ಹೊಂದಿದೆ. ಇದು ಸೌರ ಚಟುವಟಿಕೆಗಳನ್ನು ವೀಕ್ಷಿಸಲು ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago