ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾಗಿದ್ದ ಆದಿತ್ಯ ನೌಕೆ ನಿಗದಿತ ಎಲ್-1 ಪಾಯಿಂಟ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಇಸ್ರೋ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ-3 ರ ಬಳಿಕ ಇಸ್ರೋದ ಮಹತ್ತರ ಸಾಧನೆ ಇದಾಗಿದೆ. ಆದಿತ್ಯ ನೌಕೆ ಸೂರ್ಯನ ಅಧ್ಯಯನ ಆರಂಭಿಸಲಿರುವ ಮೊದಲ ನೌಕೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಚಂದ್ರಯಾನ-3 ಯಶಸ್ವಿಯಾದ 10 ದಿನಗಳಲ್ಲಿ ಆದಿತ್ಯ ಎಲ್-1 ನೌಕೆಯನ್ನು ಉಡಾವಣೆ ಮಾಡಲಾಗಿತ್ತು. ಸುದೀರ್ಘ 126 ದಿನಗಳ ಬಳಿಕ ಆದತ್ಯ ನೌಕೆ ತನ್ನ ಗಮ್ಯ ತಲುಪಿದೆ. ಈ ಸಾಧನೆಗೆ ಮೆಚ್ಚಿ ಇಸ್ರೋ ವಿಜ್ಞಾನಿಗಳನ್ನು ಮೋದಿ ಅಭಿನಂದಿಸಿದ್ದಾರೆ.
ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಇದು ಅತ್ಯಂತ ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಗಳ ನಡುವೆ ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಮಾನವೀಯತೆಯ ಪ್ರಯೋಜನಕ್ಕಾಗಿ ನಾವು ವಿಜ್ಞಾನದ ಹೊಸ ಗಡಿಗಳನ್ನು ಅನುಸರಿಸುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ಅವರು ಈ ಅಸಾಧಾರಣ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…