BREAKING NEWS

ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ: ಇಸ್ರೋ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ

ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾಗಿದ್ದ ಆದಿತ್ಯ ನೌಕೆ ನಿಗದಿತ ಎಲ್-1 ಪಾಯಿಂಟ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಇಸ್ರೋ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚಂದ್ರಯಾನ-3 ರ ಬಳಿಕ ಇಸ್ರೋದ ಮಹತ್ತರ ಸಾಧನೆ ಇದಾಗಿದೆ. ಆದಿತ್ಯ ನೌಕೆ ಸೂರ್ಯನ ಅಧ್ಯಯನ ಆರಂಭಿಸಲಿರುವ ಮೊದಲ ನೌಕೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಚಂದ್ರಯಾನ-3 ಯಶಸ್ವಿಯಾದ 10 ದಿನಗಳಲ್ಲಿ ಆದಿತ್ಯ ಎಲ್-1 ನೌಕೆಯನ್ನು ಉಡಾವಣೆ ಮಾಡಲಾಗಿತ್ತು. ಸುದೀರ್ಘ 126 ದಿನಗಳ ಬಳಿಕ ಆದತ್ಯ ನೌಕೆ ತನ್ನ ಗಮ್ಯ ತಲುಪಿದೆ. ಈ ಸಾಧನೆಗೆ ಮೆಚ್ಚಿ ಇಸ್ರೋ ವಿಜ್ಞಾನಿಗಳನ್ನು ಮೋದಿ ಅಭಿನಂದಿಸಿದ್ದಾರೆ.

ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಇದು ಅತ್ಯಂತ ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಗಳ ನಡುವೆ ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಮಾನವೀಯತೆಯ ಪ್ರಯೋಜನಕ್ಕಾಗಿ ನಾವು ವಿಜ್ಞಾನದ ಹೊಸ ಗಡಿಗಳನ್ನು ಅನುಸರಿಸುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ಅವರು ಈ ಅಸಾಧಾರಣ ಸಾಧನೆಯನ್ನು ಶ್ಲಾಘಿಸಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago