BREAKING NEWS

ಕೇರಳದ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಹಂದಿಗಳ ಹತ್ಯೆಗೆ ಜಿಲ್ಲಾಧಿಕಾರಿ ಆದೇಶ

ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್‌ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮಲೆಯಂಪಾಡಿಯಲ್ಲಿನ ಫಾರ್ಮ್‌ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇದಾದ ಬಳಿಕ ಅಲ್ಲಿಂದ 10 ಕಿಮೀ ದೂರದಲ್ಲಿರುವ ಮತ್ತೊಂದು ಫಾರ್ಮ್‌ನಲ್ಲಿರುವ ಹಂದಿಗಳನ್ನೂ ಕೊಲ್ಲಲು ಆದೇಶಿಸಲಾಗಿದೆ. ಕೊಂದ ಹಂದಿಗಳನ್ನು ಶಿಷ್ಟಾಚಾರದ ಪ್ರಕಾರ ಹೂಳಲಾಗಿದೆ.

ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದ್ದು, 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಗುರುತಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ಈ ಪ್ರದೇಶದಲ್ಲಿ ಹಂದಿ ಮಾಂಸ ಮಾರಾಟ ಮತ್ತು ಇತರ ಸ್ಥಳಗಳಿಗೆ ಸಾಗಿಸುವುದನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ.

andolanait

Recent Posts

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

3 mins ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

2 hours ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

2 hours ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

2 hours ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

2 hours ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

5 hours ago