ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಲೆಯಂಪಾಡಿಯಲ್ಲಿನ ಫಾರ್ಮ್ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಇದಾದ ಬಳಿಕ ಅಲ್ಲಿಂದ 10 ಕಿಮೀ ದೂರದಲ್ಲಿರುವ ಮತ್ತೊಂದು ಫಾರ್ಮ್ನಲ್ಲಿರುವ ಹಂದಿಗಳನ್ನೂ ಕೊಲ್ಲಲು ಆದೇಶಿಸಲಾಗಿದೆ. ಕೊಂದ ಹಂದಿಗಳನ್ನು ಶಿಷ್ಟಾಚಾರದ ಪ್ರಕಾರ ಹೂಳಲಾಗಿದೆ.
ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದ್ದು, 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಗುರುತಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಈ ಪ್ರದೇಶದಲ್ಲಿ ಹಂದಿ ಮಾಂಸ ಮಾರಾಟ ಮತ್ತು ಇತರ ಸ್ಥಳಗಳಿಗೆ ಸಾಗಿಸುವುದನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…