ತಿರುವನಂತಪುರಂ : ಕೇರಳದ ಕಣ್ಣೂರು ಜಿಲ್ಲೆಯ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ವರದಿಯಾಗಿದ್ದು, ಇಲ್ಲಿನ ಎರಡು ಫಾರ್ಮ್ಗಳಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಲೆಯಂಪಾಡಿಯಲ್ಲಿನ ಫಾರ್ಮ್ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿರುವುದನ್ನು ಶುಕ್ರವಾರ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಇದಾದ ಬಳಿಕ ಅಲ್ಲಿಂದ 10 ಕಿಮೀ ದೂರದಲ್ಲಿರುವ ಮತ್ತೊಂದು ಫಾರ್ಮ್ನಲ್ಲಿರುವ ಹಂದಿಗಳನ್ನೂ ಕೊಲ್ಲಲು ಆದೇಶಿಸಲಾಗಿದೆ. ಕೊಂದ ಹಂದಿಗಳನ್ನು ಶಿಷ್ಟಾಚಾರದ ಪ್ರಕಾರ ಹೂಳಲಾಗಿದೆ.
ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದ್ದು, 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಗುರುತಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಈ ಪ್ರದೇಶದಲ್ಲಿ ಹಂದಿ ಮಾಂಸ ಮಾರಾಟ ಮತ್ತು ಇತರ ಸ್ಥಳಗಳಿಗೆ ಸಾಗಿಸುವುದನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…