BREAKING NEWS

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದ ಜಿಲ್ಲಾಡಳಿತ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ.

ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ ಫಾರಂನಲ್ಲಿ ಆಫ್ರಿಕನ್ ಹಂದಿ ಜ್ವರದ ಸೋಂಕು ಪತ್ತೆಯಾಗಿದ್ದು, ಫಾರಂನ 10 ಕಿ.ಮೀ. ಸುತ್ತಳತೆಯಲ್ಲಿರುವ ಮತ್ತೊಂದು ಫಾರಂನಲ್ಲಿರುವ ಹಂದಿಗಳನ್ನು ಹೂತು ಹಾಕಲು ಜಿಲ್ಲಾಡಳಿತ ಆದೇಶಿಸಿದೆ.

ಹಂದಿ ಜ್ವರ ಮಾದರಿಗಳನ್ನು ಪರೀಕ್ಷಿಸಿದ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ಸೋಂಕನ್ನು ಖಚಿತಪಡಿಸಿದ್ದು, ಫಾರಂನ ಒಂದು ಕಿ.ಮೀ. ಸುತ್ತಮುತ್ತಲ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಿ ಅಲ್ಲಿಂದ ಹಂದಿ ಮಾಂಸವನ್ನು ಹೊರಗಿನ ಪ್ರದೇಶಗಳಿಗೆ ಸಾಗಿಸುವುದನ್ನು ಮೂರು ತಿಂಗಳ ಕಾಲ ನಿಷೇಧಿಸಲಾಗಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಸುತ್ತಮುತ್ತಲಿನ ಯಾವುದೇ ಫಾರಂನಲ್ಲಿ ಹಂದಿಗಳಿಗೆ ಜ್ವರ ಬಂದಿದ್ದರೆ ಇಲಾಖೆ ಗಮನಕ್ಕೆ ತರಬೇಕೆಂದು ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ರೋಗದ ಪ್ರಕರಣಗಳು ಪತ್ತೆಯಾದರೆ ವಿಪತ್ತು ನಿರ್ವಹಣಾಧಿಕಾರಿಗಳಿಗೆ ಆದಷ್ಟು ಬೇಗ ಮಾಹಿತಿ ನೀಡಬೇಕು. ಇದರಿಂದ ರೋಗ ಹರಡುವುದನ್ನು ತಪ್ಪಿಸಬಹುದಾಗಿದೆ ಮತ್ತು ಸುತ್ತಮುತ್ತಲ ಗ್ರಾಮದಲ್ಲಿ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago