ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ.
ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ ಫಾರಂನಲ್ಲಿ ಆಫ್ರಿಕನ್ ಹಂದಿ ಜ್ವರದ ಸೋಂಕು ಪತ್ತೆಯಾಗಿದ್ದು, ಫಾರಂನ 10 ಕಿ.ಮೀ. ಸುತ್ತಳತೆಯಲ್ಲಿರುವ ಮತ್ತೊಂದು ಫಾರಂನಲ್ಲಿರುವ ಹಂದಿಗಳನ್ನು ಹೂತು ಹಾಕಲು ಜಿಲ್ಲಾಡಳಿತ ಆದೇಶಿಸಿದೆ.
ಹಂದಿ ಜ್ವರ ಮಾದರಿಗಳನ್ನು ಪರೀಕ್ಷಿಸಿದ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ಸೋಂಕನ್ನು ಖಚಿತಪಡಿಸಿದ್ದು, ಫಾರಂನ ಒಂದು ಕಿ.ಮೀ. ಸುತ್ತಮುತ್ತಲ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಿ ಅಲ್ಲಿಂದ ಹಂದಿ ಮಾಂಸವನ್ನು ಹೊರಗಿನ ಪ್ರದೇಶಗಳಿಗೆ ಸಾಗಿಸುವುದನ್ನು ಮೂರು ತಿಂಗಳ ಕಾಲ ನಿಷೇಧಿಸಲಾಗಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಸುತ್ತಮುತ್ತಲಿನ ಯಾವುದೇ ಫಾರಂನಲ್ಲಿ ಹಂದಿಗಳಿಗೆ ಜ್ವರ ಬಂದಿದ್ದರೆ ಇಲಾಖೆ ಗಮನಕ್ಕೆ ತರಬೇಕೆಂದು ಸೂಚನೆ ನೀಡಲಾಗಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ರೋಗದ ಪ್ರಕರಣಗಳು ಪತ್ತೆಯಾದರೆ ವಿಪತ್ತು ನಿರ್ವಹಣಾಧಿಕಾರಿಗಳಿಗೆ ಆದಷ್ಟು ಬೇಗ ಮಾಹಿತಿ ನೀಡಬೇಕು. ಇದರಿಂದ ರೋಗ ಹರಡುವುದನ್ನು ತಪ್ಪಿಸಬಹುದಾಗಿದೆ ಮತ್ತು ಸುತ್ತಮುತ್ತಲ ಗ್ರಾಮದಲ್ಲಿ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…