BREAKING NEWS

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದ ಜಿಲ್ಲಾಡಳಿತ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ.

ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ ಫಾರಂನಲ್ಲಿ ಆಫ್ರಿಕನ್ ಹಂದಿ ಜ್ವರದ ಸೋಂಕು ಪತ್ತೆಯಾಗಿದ್ದು, ಫಾರಂನ 10 ಕಿ.ಮೀ. ಸುತ್ತಳತೆಯಲ್ಲಿರುವ ಮತ್ತೊಂದು ಫಾರಂನಲ್ಲಿರುವ ಹಂದಿಗಳನ್ನು ಹೂತು ಹಾಕಲು ಜಿಲ್ಲಾಡಳಿತ ಆದೇಶಿಸಿದೆ.

ಹಂದಿ ಜ್ವರ ಮಾದರಿಗಳನ್ನು ಪರೀಕ್ಷಿಸಿದ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ಸೋಂಕನ್ನು ಖಚಿತಪಡಿಸಿದ್ದು, ಫಾರಂನ ಒಂದು ಕಿ.ಮೀ. ಸುತ್ತಮುತ್ತಲ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಿ ಅಲ್ಲಿಂದ ಹಂದಿ ಮಾಂಸವನ್ನು ಹೊರಗಿನ ಪ್ರದೇಶಗಳಿಗೆ ಸಾಗಿಸುವುದನ್ನು ಮೂರು ತಿಂಗಳ ಕಾಲ ನಿಷೇಧಿಸಲಾಗಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಸುತ್ತಮುತ್ತಲಿನ ಯಾವುದೇ ಫಾರಂನಲ್ಲಿ ಹಂದಿಗಳಿಗೆ ಜ್ವರ ಬಂದಿದ್ದರೆ ಇಲಾಖೆ ಗಮನಕ್ಕೆ ತರಬೇಕೆಂದು ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ರೋಗದ ಪ್ರಕರಣಗಳು ಪತ್ತೆಯಾದರೆ ವಿಪತ್ತು ನಿರ್ವಹಣಾಧಿಕಾರಿಗಳಿಗೆ ಆದಷ್ಟು ಬೇಗ ಮಾಹಿತಿ ನೀಡಬೇಕು. ಇದರಿಂದ ರೋಗ ಹರಡುವುದನ್ನು ತಪ್ಪಿಸಬಹುದಾಗಿದೆ ಮತ್ತು ಸುತ್ತಮುತ್ತಲ ಗ್ರಾಮದಲ್ಲಿ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago