BREAKING NEWS

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದ ಜಿಲ್ಲಾಡಳಿತ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಎಲ್ಲಾ ಹಂದಿಗಳನ್ನು ಕೊಂದು ಹೂತು ಹಾಕಲು ಆದೇಶಿಸಿದೆ.

ಕಣ್ಣೂರು ಜಿಲ್ಲೆಯ ಕಣಿಚಾರ್ ಎಂಬ ಹಳ್ಳಿಯ ಸಮೀಪದ ಮಲೆಯಂಪಾದಿ ಎಂಬಲ್ಲಿರುವ ಖಾಸಗಿ ಹಂದಿ ಫಾರಂನಲ್ಲಿ ಆಫ್ರಿಕನ್ ಹಂದಿ ಜ್ವರದ ಸೋಂಕು ಪತ್ತೆಯಾಗಿದ್ದು, ಫಾರಂನ 10 ಕಿ.ಮೀ. ಸುತ್ತಳತೆಯಲ್ಲಿರುವ ಮತ್ತೊಂದು ಫಾರಂನಲ್ಲಿರುವ ಹಂದಿಗಳನ್ನು ಹೂತು ಹಾಕಲು ಜಿಲ್ಲಾಡಳಿತ ಆದೇಶಿಸಿದೆ.

ಹಂದಿ ಜ್ವರ ಮಾದರಿಗಳನ್ನು ಪರೀಕ್ಷಿಸಿದ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ಸೋಂಕನ್ನು ಖಚಿತಪಡಿಸಿದ್ದು, ಫಾರಂನ ಒಂದು ಕಿ.ಮೀ. ಸುತ್ತಮುತ್ತಲ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಿ ಅಲ್ಲಿಂದ ಹಂದಿ ಮಾಂಸವನ್ನು ಹೊರಗಿನ ಪ್ರದೇಶಗಳಿಗೆ ಸಾಗಿಸುವುದನ್ನು ಮೂರು ತಿಂಗಳ ಕಾಲ ನಿಷೇಧಿಸಲಾಗಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಸುತ್ತಮುತ್ತಲಿನ ಯಾವುದೇ ಫಾರಂನಲ್ಲಿ ಹಂದಿಗಳಿಗೆ ಜ್ವರ ಬಂದಿದ್ದರೆ ಇಲಾಖೆ ಗಮನಕ್ಕೆ ತರಬೇಕೆಂದು ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ರೋಗದ ಪ್ರಕರಣಗಳು ಪತ್ತೆಯಾದರೆ ವಿಪತ್ತು ನಿರ್ವಹಣಾಧಿಕಾರಿಗಳಿಗೆ ಆದಷ್ಟು ಬೇಗ ಮಾಹಿತಿ ನೀಡಬೇಕು. ಇದರಿಂದ ರೋಗ ಹರಡುವುದನ್ನು ತಪ್ಪಿಸಬಹುದಾಗಿದೆ ಮತ್ತು ಸುತ್ತಮುತ್ತಲ ಗ್ರಾಮದಲ್ಲಿ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

lokesh

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

23 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago