ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ.
ಗುಜರಾತಿನ ಮೆಣಸಿನಕಾಯಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಂದಿನಿಯ ಹಾಲಿಗೆ ಅಮೂಲ್ ಎಂಬ ಹುಳಿ ಹಿಂಡಿದ ನಂತರ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟು, ಕರುನಾಡಿನ ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಟೀಕಿಸಿದೆ.
ಇದೆಲ್ಲದರ ಹಿಂದೆ ಇರುವವರು ಯಾರು? ಮೆಣಸು ಬೆಳೆಯಲ್ಲಿ ಗುಜರಾತಿಗಿಂತ ಕರ್ನಾಟಕವೇ ಮುಂದಿದ್ದರೂ ಅಲ್ಲಿನ ಮೆಣಸನ್ನು ಇಲ್ಲಿಗೆ ತಂದು ರಾಜ್ಯದ ಮಾರುಕಟ್ಟೆಯನ್ನು ಕುಲುಷಿತಗೊಳಿಸುತ್ತಿರುವವರು ಯಾರು? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಹೇಳಿದೆ.
ಬ್ಯಾಡಗಿ ಮಾರುಕಟ್ಟೆಯಲ್ಲಿ ಗುಜರಾತಿನ ಪುಪ್ಪ ತಳಿಯ ಮೆಣಸಿನ ಕಾಯಿ ಮಾರಾಟವಾಗುತ್ತಿದೆ ಎಂಬ ವದಂತಿ ಹೆಚ್ಚಾಗಿದ್ದು, ಇದು ಮತ್ತೊಂದು ಚರ್ಚೆಗೆ ಕಾರಣವಾಗಲಿದೆ ಎಂಬ ಅನುಮಾನ ಹುಟ್ಟುಹಾಕಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…