BREAKING NEWS

ಅಮೂಲ್ ಬಳಿಕ ಗುಜರಾತ್ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಗೂ ಅಮೂಲ್‌ ಹಾಲಿನ ವಿಚಾರದ ಚರ್ಚೆಯ ನಂತರ ಇದೀಗ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟಿರುವುದನ್ನು ಕಾಂಗ್ರೆಸ್ ಖಾರವಾಗಿಯೇ ಪ್ರಶ್ನೆಸಿದೆ.

ಗುಜರಾತಿನ ಮೆಣಸಿನಕಾಯಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, ನಂದಿನಿಯ ಹಾಲಿಗೆ ಅಮೂಲ್ ಎಂಬ ಹುಳಿ ಹಿಂಡಿದ ನಂತರ ಗುಜರಾತಿನ ಮೆಣಸಿನಕಾಯಿ ರಾಜ್ಯಕ್ಕೆ ಲಗ್ಗೆ ಇಟ್ಟು, ಕರುನಾಡಿನ ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಟೀಕಿಸಿದೆ.

ಇದೆಲ್ಲದರ ಹಿಂದೆ ಇರುವವರು ಯಾರು? ಮೆಣಸು ಬೆಳೆಯಲ್ಲಿ ಗುಜರಾತಿಗಿಂತ ಕರ್ನಾಟಕವೇ ಮುಂದಿದ್ದರೂ ಅಲ್ಲಿನ ಮೆಣಸನ್ನು ಇಲ್ಲಿಗೆ ತಂದು ರಾಜ್ಯದ ಮಾರುಕಟ್ಟೆಯನ್ನು ಕುಲುಷಿತಗೊಳಿಸುತ್ತಿರುವವರು ಯಾರು? ಎಂದು ಕಾಂಗ್ರೆಸ್‌ ವ್ಯಂಗ್ಯವಾಗಿ ಹೇಳಿದೆ.

ಬ್ಯಾಡಗಿ ಮಾರುಕಟ್ಟೆಯಲ್ಲಿ ಗುಜರಾತಿನ ಪುಪ್ಪ ತಳಿಯ ಮೆಣಸಿನ ಕಾಯಿ ಮಾರಾಟವಾಗುತ್ತಿದೆ ಎಂಬ ವದಂತಿ ಹೆಚ್ಚಾಗಿದ್ದು, ಇದು ಮತ್ತೊಂದು ಚರ್ಚೆಗೆ ಕಾರಣವಾಗಲಿದೆ ಎಂಬ ಅನುಮಾನ ಹುಟ್ಟುಹಾಕಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 mins ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 mins ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

1 hour ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

3 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

6 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

6 hours ago