BREAKING NEWS

ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ವ್ಯಾಪಾರಸ್ಥರಿಗೆ ಶಾಕ್ : ದರ ಏರಿಕೆ ಖಂಡಿಸಿ ಅಘೋಷಿತ ಬಂದ್

ಬಳ್ಳಾರಿ : ಉಚಿತ ವಿದ್ಯುತ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ದರ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ವ್ಯಾಪಾರಸ್ಥರು ಅಘೋಷಿತ ಬಂದ್‌ ಮಾಡಿದ್ದಾರೆ.

ರಾಜ್ಯ ಸರ್ಕಾರದಿಂದ ಷರತ್ತುಗಳೊಂದಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿದೆ. ಇದರಿಂದ ರೊಚ್ಚಿಗೆದ್ದ ವರ್ತಕರು ಬೇಕಾಬಿಟ್ಟಿ ದರ ಏರಿಕೆ ಖಂಡಿಸಿ ಅಘೋಷಿತ ಬಂದ್‌ಗೆ ಮುಂದಾಗಿದ್ದಾರೆ. ಬಳ್ಳಾರಿಯ ಕಾಳಂಮ್ಮಾ ಸ್ಟ್ರೀಟ್‌ ಸಂಪೂರ್ಣವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ವರ್ತಕರು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯುತ್‌ ಬಿಲ್‌ ಏರಿಕೆ ಸಂಬಂಧ ಬೆಸ್ಕಾಂ ನಿನ್ನೆಯಷ್ಟೇ ಸ್ಪಷ್ಟನೆ ನೀಡಿತ್ತು. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಕೆಇಆರ್‌ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್‌ ವಿದ್ಯುತ್‌ಗೆ ಪ್ರತಿ ಯೂನಿಟ್‌ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್‌ಗೆ 2ನೇ ಶ್ರೇಣಿ ದರ ಪ್ರತಿ ಯೂನಿಟ್‌ಗೆ 7 ರೂ. ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ ಸಂಗ್ರಹಿಸಲಾಗುತ್ತಿತ್ತು. ಮೊದಲ 50 ಯೂನಿಟ್ ಗೆ 4.15 ರೂ., ನಂತರದ 50 ಯೂನಿಟ್ ಗೆ 5.6 ರೂ. ಹಾಗೂ 100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು. ಇದೀಗ ಎರಡು ಶ್ರೇಣಿ ದರಗಳಲ್ಲಿ ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದರು.

lokesh

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

3 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

3 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

3 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

3 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

3 hours ago