BREAKING NEWS

ಮತ್ತೆ ಮುರುಘಾ ಶ್ರೀ ತೆಕ್ಕೆಗೆ ಬಿತ್ತು ಮಠ ಹಾಗೂ ವಿದ್ಯಾಪೀಠದ ಜವಬ್ದಾರಿ

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದ ಹೊರ ಬಂದ ಮೇಲೆ, ಮಠ ಹಾಗೂ ವಿದ್ಯಾಪೀಠದ ಅಧಿಕಾರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ಹೈಕೋರ್ಟ್‌ ನ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿ ಆಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಗೀತಾ ಅವರು ಶಿವಮೂರ್ತಿ ಮುರುಘಾ ಶರಣರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ.

ಮುರುಘಾ ಶರಣರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ಹೈಕೋರ್ಟ್‌ ನಿರ್ಬಂಧ ಹೇರಿದ್ದರೂ ಕೂಡ ಜಿಲ್ಲಾ ನ್ಯಾಯಾಲಾಯ ಅಧಿಕಾರವನ್ನು ಹಸ್ತಾಂತರಿಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಮಠದ ಪೀಠಾಧಿಪತಿಗಳಿಗೆ ಹಸ್ತಾಂತರಿಸಿದ್ದಾರೆ. ಮಠದ ಸದ್ಭಕ್ತರು ಸಹಕರಿಸಬೇಕು ಎಂದು ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಮುರುಘಾ ಮಠದ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದರು ಹಾಗಾಗಿ ಮಠದ ಆಡಳಿತವನ್ನು ನೋಡಿಕೊಳ್ಳುವ ಜವಬ್ಧಾರಿಯನ್ನು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರಿಗೆ ನೀಡಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಮುರುಘಾ ಶರಣರು ಕೆಲದಿನಗಳ ಹಿಂದೆ ಬೇಲ್‌ ಮೇಲೆ ಹೊರ ಬಂದಿದ್ದರು. ಜೈಲಿನಿಂದ ಹರ ಬರುತ್ತಿದ್ದಂತೆಯೇ ಶರಣರಿಗೆ ಎರಡನೇ ಕೇಸ್‌ ನಲ್ಲಿ ಅರೆಸ್ಟ್‌ ವಾರಂಟ್‌ ಜಾರಿಯಾಗಿತ್ತು. ಇದೆಲ್ಲದರ ನಡುವೆ ಇದೀಗ ಮತ್ತೆ ಮಠದ ಆಡಳಿತ ಶಿವಮೂರ್ತಿ ಮುರುಘಾ ಶರಣರ ತೆಕ್ಕೆಗೆ ಬಿದ್ದಿದೆ.

lokesh

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

42 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

1 hour ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

1 hour ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

3 hours ago