BREAKING NEWS

ಮತ್ತೆ ಮುರುಘಾ ಶ್ರೀ ತೆಕ್ಕೆಗೆ ಬಿತ್ತು ಮಠ ಹಾಗೂ ವಿದ್ಯಾಪೀಠದ ಜವಬ್ದಾರಿ

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದ ಹೊರ ಬಂದ ಮೇಲೆ, ಮಠ ಹಾಗೂ ವಿದ್ಯಾಪೀಠದ ಅಧಿಕಾರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ಹೈಕೋರ್ಟ್‌ ನ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿ ಆಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಗೀತಾ ಅವರು ಶಿವಮೂರ್ತಿ ಮುರುಘಾ ಶರಣರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ.

ಮುರುಘಾ ಶರಣರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ಹೈಕೋರ್ಟ್‌ ನಿರ್ಬಂಧ ಹೇರಿದ್ದರೂ ಕೂಡ ಜಿಲ್ಲಾ ನ್ಯಾಯಾಲಾಯ ಅಧಿಕಾರವನ್ನು ಹಸ್ತಾಂತರಿಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಮಠದ ಪೀಠಾಧಿಪತಿಗಳಿಗೆ ಹಸ್ತಾಂತರಿಸಿದ್ದಾರೆ. ಮಠದ ಸದ್ಭಕ್ತರು ಸಹಕರಿಸಬೇಕು ಎಂದು ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಮುರುಘಾ ಮಠದ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದರು ಹಾಗಾಗಿ ಮಠದ ಆಡಳಿತವನ್ನು ನೋಡಿಕೊಳ್ಳುವ ಜವಬ್ಧಾರಿಯನ್ನು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರಿಗೆ ನೀಡಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಮುರುಘಾ ಶರಣರು ಕೆಲದಿನಗಳ ಹಿಂದೆ ಬೇಲ್‌ ಮೇಲೆ ಹೊರ ಬಂದಿದ್ದರು. ಜೈಲಿನಿಂದ ಹರ ಬರುತ್ತಿದ್ದಂತೆಯೇ ಶರಣರಿಗೆ ಎರಡನೇ ಕೇಸ್‌ ನಲ್ಲಿ ಅರೆಸ್ಟ್‌ ವಾರಂಟ್‌ ಜಾರಿಯಾಗಿತ್ತು. ಇದೆಲ್ಲದರ ನಡುವೆ ಇದೀಗ ಮತ್ತೆ ಮಠದ ಆಡಳಿತ ಶಿವಮೂರ್ತಿ ಮುರುಘಾ ಶರಣರ ತೆಕ್ಕೆಗೆ ಬಿದ್ದಿದೆ.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

11 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

11 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

13 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

14 hours ago