BREAKING NEWS

ಕಾಂಗ್ರೆಸ್‌ನ ಗ್ಯಾರಂಟಿ ಪ್ರಣಾಳಿಕೆ ಬಿಡುಗಡೆ:‌ ಉದ್ಯೋಗ ಸೃಷ್ಠಿ, ಸಮಾನತೆಗೆ ಒತ್ತು

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೇರಬೇಕೆಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಕಾಂಗ್ರೆಸ್‌ ಶುಕ್ರವಾರ(ಏಪ್ರಿಲ್‌ 5) ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್‌ ವರಿಷ್ಟೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್‌ ಗಾಂಧಿ ಹಾಗೂ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರ ಹಾಗೂ ವೇಣುಗೋಪಾಲ್‌ ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪ ಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಯರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಡುವುದು ಎಂದು ಉಲ್ಲೇಖಿಸಿದ್ದಾರೆ. ದೇಶವ್ಯಾಪ್ತಿ ಜಾತಿ ಗಣತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗಿರುವ ಶೇ‌. 50ರ ಮೀಸಲಾತಿಯನ್ನು ಏರಿಕೆ ಮಾಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದು ಎಂದು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಪಂಚ ನ್ಯಾಯ ಅಥವಾ ನ್ಯಾಯದ ಸ್ತಂಭಗಳ ಭರವಸೆಯು ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ ಹಾಗೂ ಸಹಭಾಗಿತ್ವ ನ್ಯಾಯವನ್ನು ಒಳಗೊಂಡಿದೆ. ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ನೀಡಲಾಗಿರುವ ಶೇ. 10ರಷ್ಟು ಮೀಸಲಾತಿಯನ್ನು ಯಾವುದೇ ತಾರತಮ್ಯವಿಲ್ಲದೆ, ಎಲ್ಲ ಜಾತಿ, ಜನಾಂಗಗಳ ದುರ್ಬಲರಿಗೂ ಹಂಚಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಹುದ್ದೆಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳನ್ನು ಒಂದು ವರ್ಷದ ಅವಧಿಯೊಳಗೆ ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್‌ ಭರವಸೆ ನೀಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ, ಅಗ್ನಿಪಥ್ ಯೋಜನೆ ರದ್ದು, ವಿವಿಧ ಹಂತಗಳಲ್ಲಿ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದೆ. ಸರ್ಕಾರಿ ಹಾಗೂ ಸಾರ್ವಜನಿಕ ಉದ್ಯಮಗಳಲ್ಲಿನ ನಿಯಮಿತ ಉದ್ಯೋಗಗಳಿಗೆ ಗುತ್ತಿಗೆ ಆಧಾರದ ನೇಮಕಾತಿಯನ್ನು ನಿಷೇಧಿಸಲಾಗುವುದು ಹಾಗೂ ಅಂತಹ ಉದ್ಯೋಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಖಾಯಂಗೊಳಿಸಲಾಗುವುದು ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್‌ ಪಕ್ಷವು ಈಗಾಗಲೇ ಪಂಚ ನ್ಯಾಯ ‘25 ಗ್ಯಾರಂಟಿ’ಗಳನ್ನು ಘೋಷಿಸಿದೆ. ಮನೆ ಮನೆ ಗ್ಯಾರಂಟಿ ಅಭಿಯಾನವು ಆರಂಭವಾಗಿದೆ. ದೇಶದಾದ್ಯಂತ ಸಮಾಲೋಚನೆಗಳನ್ನು ನಡೆಸಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಇ –ಮೇಲ್‌ ಹಾಗೂ ಆವಾಜ್‌ ಭಾರತ್‌ ಕಿ ವೆಬ್‌ಸೈಟ್‌ ಮೂಲಕ ಕಾಂಗ್ರೆಸ್‌ ಪ್ರಾಣಾಳಿಕೆಗೆ ಸಾವಿರಾರು ಸಲಹೆಗಳು ಬಂದಿದ್ದವು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago