BREAKING NEWS

ಕಾಂಗ್ರೆಸ್‌ನ ಗ್ಯಾರಂಟಿ ಪ್ರಣಾಳಿಕೆ ಬಿಡುಗಡೆ:‌ ಉದ್ಯೋಗ ಸೃಷ್ಠಿ, ಸಮಾನತೆಗೆ ಒತ್ತು

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೇರಬೇಕೆಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಕಾಂಗ್ರೆಸ್‌ ಶುಕ್ರವಾರ(ಏಪ್ರಿಲ್‌ 5) ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್‌ ವರಿಷ್ಟೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್‌ ಗಾಂಧಿ ಹಾಗೂ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರ ಹಾಗೂ ವೇಣುಗೋಪಾಲ್‌ ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪ ಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಯರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಡುವುದು ಎಂದು ಉಲ್ಲೇಖಿಸಿದ್ದಾರೆ. ದೇಶವ್ಯಾಪ್ತಿ ಜಾತಿ ಗಣತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗಿರುವ ಶೇ‌. 50ರ ಮೀಸಲಾತಿಯನ್ನು ಏರಿಕೆ ಮಾಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದು ಎಂದು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಪಂಚ ನ್ಯಾಯ ಅಥವಾ ನ್ಯಾಯದ ಸ್ತಂಭಗಳ ಭರವಸೆಯು ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ ಹಾಗೂ ಸಹಭಾಗಿತ್ವ ನ್ಯಾಯವನ್ನು ಒಳಗೊಂಡಿದೆ. ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ನೀಡಲಾಗಿರುವ ಶೇ. 10ರಷ್ಟು ಮೀಸಲಾತಿಯನ್ನು ಯಾವುದೇ ತಾರತಮ್ಯವಿಲ್ಲದೆ, ಎಲ್ಲ ಜಾತಿ, ಜನಾಂಗಗಳ ದುರ್ಬಲರಿಗೂ ಹಂಚಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಹುದ್ದೆಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳನ್ನು ಒಂದು ವರ್ಷದ ಅವಧಿಯೊಳಗೆ ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್‌ ಭರವಸೆ ನೀಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ, ಅಗ್ನಿಪಥ್ ಯೋಜನೆ ರದ್ದು, ವಿವಿಧ ಹಂತಗಳಲ್ಲಿ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದೆ. ಸರ್ಕಾರಿ ಹಾಗೂ ಸಾರ್ವಜನಿಕ ಉದ್ಯಮಗಳಲ್ಲಿನ ನಿಯಮಿತ ಉದ್ಯೋಗಗಳಿಗೆ ಗುತ್ತಿಗೆ ಆಧಾರದ ನೇಮಕಾತಿಯನ್ನು ನಿಷೇಧಿಸಲಾಗುವುದು ಹಾಗೂ ಅಂತಹ ಉದ್ಯೋಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಖಾಯಂಗೊಳಿಸಲಾಗುವುದು ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್‌ ಪಕ್ಷವು ಈಗಾಗಲೇ ಪಂಚ ನ್ಯಾಯ ‘25 ಗ್ಯಾರಂಟಿ’ಗಳನ್ನು ಘೋಷಿಸಿದೆ. ಮನೆ ಮನೆ ಗ್ಯಾರಂಟಿ ಅಭಿಯಾನವು ಆರಂಭವಾಗಿದೆ. ದೇಶದಾದ್ಯಂತ ಸಮಾಲೋಚನೆಗಳನ್ನು ನಡೆಸಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಇ –ಮೇಲ್‌ ಹಾಗೂ ಆವಾಜ್‌ ಭಾರತ್‌ ಕಿ ವೆಬ್‌ಸೈಟ್‌ ಮೂಲಕ ಕಾಂಗ್ರೆಸ್‌ ಪ್ರಾಣಾಳಿಕೆಗೆ ಸಾವಿರಾರು ಸಲಹೆಗಳು ಬಂದಿದ್ದವು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

16 mins ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

24 mins ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

6 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

6 hours ago