BREAKING NEWS

ರಾಜಸ್ಥಾನದಲ್ಲಿ ವಾಯುಪಡೆಯ ಮಿಗ್‌-21 ಯುದ್ಧ ವಿಮಾನ ಪತನ: ಮೂವರು ನಾಗರಿಕರ ಸಾವು

ಬಿಕಾನೇರ್: ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನವೊಂದು ರಾಜಸ್ಥಾನದ ಹಳ್ಳಿಯೊಂದರಲ್ಲಿ ಮನೆಗೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇತರ ಮೂವರು ತೀವ್ರವಾಗಿ ಗಾಯಗೊಂಡರುವ ಘಟನೆ ಸೋಮವಾರ ನಡೆದಿದೆ.

ವಿಮಾನವು ಸೂರತ್‍ಗಢ ವಾಯುನೆಲೆಯಿಂದ ನಿತ್ಯದ ವ್ಯಾಯಾಮಕ್ಕಾಗಿ ಟೇಕಾಫ್ ಆಗಿದ್ದು, ತಾಂತ್ರಿಕ ದೋಷದಿಂದಾಗಿ ರಾಜಸ್ಥಾನದ ಹನುಮಾನ್‍ಗಢ್‍ನ ಬಹ್ಲೋಲ್ ನಗರದ ಬಳಿ ಪತನಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬಹ್ಲೋಲ್ ನಗರದ ಮನೆಯೊಂದರ ಮೇಲೆ ವಿಮಾನ ಬಿದ್ದ ಕಾರಣ ಮನೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ಪತನವಾಗುವ ಸಂದರ್ಭದಲ್ಲಿ ಪೈಲಟ್ ಪ್ಯಾರಾಚೂಟ್‍ನಿಂದ ಹೊರ ಜಿಗಿದ ಪರಿಣಾಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಣ್ಣಪುಟ್ಟ ಗಾಯಗಳಾಗಿರುವ ಪೈಲಟ್‍ನನ್ನು ರಕ್ಷಿಸಲು ಹೆಲಿಕಾಪ್ಟರ್ ಧಾವಿಸಲಾಗಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ತಿಳಿಸಿದೆ.

ಪೈಲಟ್ ಆನ್‍ಬೋರ್ಡ್ ತುರ್ತು ಪರಿಸ್ಥಿತಿಯನ್ನು ಅನುಭವಿಸಿದರು, ನಂತರ ಅವರು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಪ್ರಕಾರ ವಿಮಾನವನ್ನು ಮರುಪಡೆಯಲು ಪ್ರಯತ್ನಿಸಿದರು. ಹಾಗೆ ಮಾಡಲು ವಿಫಲವಾದ ನಂತರ ಅವರು ಪ್ಯಾರಾಚೂಟ್ ಮೂಲಕ ಹೊರ ಜಿಗಿಯಬೇಕಾಯಿತು.

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಹೇಳಿದೆ. ವಿಮಾನ ಪತನಗೊಂಡ ಪ್ರದೇಶದಲ್ಲಿ ರಕ್ಷಣಾ ಪಡೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago