BREAKING NEWS

ರಾಜಸ್ಥಾನದಲ್ಲಿ ವಾಯುಪಡೆಯ ಮಿಗ್‌-21 ಯುದ್ಧ ವಿಮಾನ ಪತನ: ಮೂವರು ನಾಗರಿಕರ ಸಾವು

ಬಿಕಾನೇರ್: ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನವೊಂದು ರಾಜಸ್ಥಾನದ ಹಳ್ಳಿಯೊಂದರಲ್ಲಿ ಮನೆಗೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇತರ ಮೂವರು ತೀವ್ರವಾಗಿ ಗಾಯಗೊಂಡರುವ ಘಟನೆ ಸೋಮವಾರ ನಡೆದಿದೆ.

ವಿಮಾನವು ಸೂರತ್‍ಗಢ ವಾಯುನೆಲೆಯಿಂದ ನಿತ್ಯದ ವ್ಯಾಯಾಮಕ್ಕಾಗಿ ಟೇಕಾಫ್ ಆಗಿದ್ದು, ತಾಂತ್ರಿಕ ದೋಷದಿಂದಾಗಿ ರಾಜಸ್ಥಾನದ ಹನುಮಾನ್‍ಗಢ್‍ನ ಬಹ್ಲೋಲ್ ನಗರದ ಬಳಿ ಪತನಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬಹ್ಲೋಲ್ ನಗರದ ಮನೆಯೊಂದರ ಮೇಲೆ ವಿಮಾನ ಬಿದ್ದ ಕಾರಣ ಮನೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ಪತನವಾಗುವ ಸಂದರ್ಭದಲ್ಲಿ ಪೈಲಟ್ ಪ್ಯಾರಾಚೂಟ್‍ನಿಂದ ಹೊರ ಜಿಗಿದ ಪರಿಣಾಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಣ್ಣಪುಟ್ಟ ಗಾಯಗಳಾಗಿರುವ ಪೈಲಟ್‍ನನ್ನು ರಕ್ಷಿಸಲು ಹೆಲಿಕಾಪ್ಟರ್ ಧಾವಿಸಲಾಗಿದೆ ಎಂದು ಭಾರತೀಯ ವಾಯುಪಡೆ (ಐಎಎಫ್) ತಿಳಿಸಿದೆ.

ಪೈಲಟ್ ಆನ್‍ಬೋರ್ಡ್ ತುರ್ತು ಪರಿಸ್ಥಿತಿಯನ್ನು ಅನುಭವಿಸಿದರು, ನಂತರ ಅವರು ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳ ಪ್ರಕಾರ ವಿಮಾನವನ್ನು ಮರುಪಡೆಯಲು ಪ್ರಯತ್ನಿಸಿದರು. ಹಾಗೆ ಮಾಡಲು ವಿಫಲವಾದ ನಂತರ ಅವರು ಪ್ಯಾರಾಚೂಟ್ ಮೂಲಕ ಹೊರ ಜಿಗಿಯಬೇಕಾಯಿತು.

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಐಎಎಫ್ ಹೇಳಿದೆ. ವಿಮಾನ ಪತನಗೊಂಡ ಪ್ರದೇಶದಲ್ಲಿ ರಕ್ಷಣಾ ಪಡೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago