BREAKING NEWS

ಕೆಲಸದ ಸಮಯ ಮುಗಿಯಿತೆಂದು ದಿಲ್ಲಿ ತಲುಪಬೇಕಿದ್ದ 300 ಜನರ ಜೈಪುರದಲ್ಲೇ ಇಳಿಸಿ ಹೋದ ಏರ್‌ ಇಂಡಿಯಾ ಪೈಲಟ್‌!

ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್‌ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್‌ನಿಂದ ದೆಹಲಿಗೆ ಏರ್‌ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್‌ ಇಂಡಿಯಾ ವಿಮಾನ ಲ್ಯಾಂಡ್‌ ಆಯಿತು. ಬಳಿಕ ದೆಹಲಿಯಲ್ಲಿ ಇಳಿಸಲು ನಿಶಾನೆ ಸಿಕ್ಕಿತಾದರೂ, ಕಾರ್ಯನಿರ್ವಹಣಾ ಅವಧಿ ಮುಗಿದಿದ್ದ ಕಾರಣ ವಿಮಾನ ಚಾಲನೆಗೆ ಪೈಲಟ್‌ ನಿರಾಕರಿಸಿದ. ಹೀಗಾಗಿ ಪ್ರಯಾಣಿಕರು ಜೈಪುರದಲ್ಲೇ ಸಿಲುಕುವಂತಾಯಿತು.

ಆಕ್ರೋಶಗೊಂಡ ಪ್ರಯಾಣಿಕರು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಏರ್‌ ಇಂಡಿಯಾಗೆ ಟ್ವಿಟ್ಟರ್‌ ಮೂಲಕ ದೂರು ನೀಡಿದರು. ಬಳಿಕ ಬದಲಿ ಪೈಲಟ್‌ನನ್ನು ಕಳುಹಿಸಿ ಪ್ರಯಾಣಿಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಆಗಿದ್ದೇನು? : ಲಂಂಡನ್‌ನಿಂದ ದೆಹಲಿಗೆ 300 ಪ್ರಯಾಣಿಕರನ್ನು ಹೊತ್ತ ಏರ್‌ ಇಂಡಿಯಾ ವಿಮಾನ ಬೆಳಗಿನ ಜಾವ ದೆಹಲಿಗೆ ಆಗಮಿಸಿತು. ಆದರೆ ಪ್ರತಿಕೂಲ ಹವಾಮಾನ ಇದ್ದ ಕಾರಣ ದೆಹಲಿಯ ಆಗಸದಲ್ಲೇ 10 ನಿಮಿಷ ಹಾರಾಟ ನಡೆಸುವಂತೆ ಪೈಲಟ್‌ಗೆ ಸೂಚಿಸಲಾಯಿತು. ಹವಾಮಾನ ಸುಧಾರಿಸದ ಹಿನ್ನೆಲೆಯಲ್ಲಿ ಬೆಳಗಿನ ಜಾವ 4ಕ್ಕೆ ವಿಮಾನವನ್ನು ಜೈಪುರದಲ್ಲಿ ಇಳಿಸಲಾಯಿತು.

ಕೆಲ ಹೊತ್ತಿನ ಬಳಿಕ ದೆಹಲಿಯಲ್ಲಿ ವಿಮಾನ ಲ್ಯಾಂಡ್‌ ಮಾಡಲು ಅನುಮತಿ ಬಂತಾದರೂ ವಿಮಾನ ಹಾರಿಸಲು ಪೈಲಟ್‌ ನಿರಾಕರಿಸಿದರು. ಪೈಲಟ್‌ಗಳಿಗೆ ನಿರ್ದಿಷ್ಟ ಕರ್ತವ್ಯದ ಮಿತಿ ಇರುತ್ತದೆ. ಏರ್‌ ಇಂಡಿಯಾ ಪೈಲಟ್‌ ಆ ಮಿತಿಯನ್ನು ಮೀರಿದ್ದರು. ಹೀಗಾಗಿ ಅವರು ಒಪ್ಪಲಿಲ್ಲ. ಇದೊಂದು ಸುರಕ್ಷತಾ ಕ್ರಮವಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ಪಾಕ್‌ ವಾಯು ಪ್ರದೇಶ ಪ್ರವೇಶಿಸಿದ್ದ ಶ್ರೀನಗರ – ಜಮ್ಮು ವಿಮಾನ : ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ಜಮ್ಮುವಿಗೆ ಇಂಡಿಗೋ ವಿಮಾನವೊಂದು ಭಾನುವಾರ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತ್ತು. ಈ ಸಂಬಂಧ ಮಾಹಿತಿ ನೀಡಿದ ಅಧಿಕಾರಿ, “ಇಂಡಿಗೋ 6e-2124 ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತು ಮತ್ತು ವಿಮಾನವನ್ನು ಅಮೃತಸರಕ್ಕೆ ಮಾರ್ಗ ಬದಲಾವಣೆ ಮಾಡಲಾಯ್ತು” ಎಂದು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಈ ಘಟನೆ ಕೆಲ ಕಾಲ ಅಧಿಕಾರಿಗಳಲ್ಲಿ ಆತಂಕ ಮೂಡಿಸಿತ್ತಾದರೂ ಅದೃಷ್ಟವಶಾತ್‌ ವಿಮಾನ ಯಶಸ್ವಿಯಾಗಿ ಅಮೃತಸರದ ಕಡೆಗೆ ಮಾರ್ಗ ಬದಲಾವಣೆಯಾಗಿ ಅಲ್ಲೇ ಲ್ಯಾಂಡ್‌ ಆಗಿದೆ. ಇನ್ನು, ಈ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಪರಿಸ್ಥಿತಿಯ ಬಗ್ಗೆ ವಿಮಾನಯಾನ ಸಂಸ್ಥೆಯು ಎರಡೂ ದೇಶಗಳಲ್ಲಿನ ಅಧಿಕಾರಿಗಳಿಗೆ ತಿಳಿಸಿತ್ತು ಎಂದೂ ತಿಳಿದುಬಂದಿದೆ. ಹಾಗೆ, ವಿಮಾನದ ತಿರುವಿನ ಬಗ್ಗೆ ಜಮ್ಮು ಮತ್ತು ಲಾಹೋರ್ ಎಟಿಸಿ ನಡುವೆ ಸಮನ್ವಯ ಸಾಧಿಸಲಾಗಿತ್ತು ಎಂದೂ ಹೇಳಿದ್ದಾರೆ.

lokesh

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

4 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

6 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

7 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

7 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

7 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

9 hours ago