ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಯಿತು. ಬಳಿಕ ದೆಹಲಿಯಲ್ಲಿ ಇಳಿಸಲು ನಿಶಾನೆ ಸಿಕ್ಕಿತಾದರೂ, ಕಾರ್ಯನಿರ್ವಹಣಾ ಅವಧಿ ಮುಗಿದಿದ್ದ ಕಾರಣ ವಿಮಾನ ಚಾಲನೆಗೆ ಪೈಲಟ್ ನಿರಾಕರಿಸಿದ. ಹೀಗಾಗಿ ಪ್ರಯಾಣಿಕರು ಜೈಪುರದಲ್ಲೇ ಸಿಲುಕುವಂತಾಯಿತು.
ಆಕ್ರೋಶಗೊಂಡ ಪ್ರಯಾಣಿಕರು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಏರ್ ಇಂಡಿಯಾಗೆ ಟ್ವಿಟ್ಟರ್ ಮೂಲಕ ದೂರು ನೀಡಿದರು. ಬಳಿಕ ಬದಲಿ ಪೈಲಟ್ನನ್ನು ಕಳುಹಿಸಿ ಪ್ರಯಾಣಿಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.
ಆಗಿದ್ದೇನು? : ಲಂಂಡನ್ನಿಂದ ದೆಹಲಿಗೆ 300 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಬೆಳಗಿನ ಜಾವ ದೆಹಲಿಗೆ ಆಗಮಿಸಿತು. ಆದರೆ ಪ್ರತಿಕೂಲ ಹವಾಮಾನ ಇದ್ದ ಕಾರಣ ದೆಹಲಿಯ ಆಗಸದಲ್ಲೇ 10 ನಿಮಿಷ ಹಾರಾಟ ನಡೆಸುವಂತೆ ಪೈಲಟ್ಗೆ ಸೂಚಿಸಲಾಯಿತು. ಹವಾಮಾನ ಸುಧಾರಿಸದ ಹಿನ್ನೆಲೆಯಲ್ಲಿ ಬೆಳಗಿನ ಜಾವ 4ಕ್ಕೆ ವಿಮಾನವನ್ನು ಜೈಪುರದಲ್ಲಿ ಇಳಿಸಲಾಯಿತು.
ಕೆಲ ಹೊತ್ತಿನ ಬಳಿಕ ದೆಹಲಿಯಲ್ಲಿ ವಿಮಾನ ಲ್ಯಾಂಡ್ ಮಾಡಲು ಅನುಮತಿ ಬಂತಾದರೂ ವಿಮಾನ ಹಾರಿಸಲು ಪೈಲಟ್ ನಿರಾಕರಿಸಿದರು. ಪೈಲಟ್ಗಳಿಗೆ ನಿರ್ದಿಷ್ಟ ಕರ್ತವ್ಯದ ಮಿತಿ ಇರುತ್ತದೆ. ಏರ್ ಇಂಡಿಯಾ ಪೈಲಟ್ ಆ ಮಿತಿಯನ್ನು ಮೀರಿದ್ದರು. ಹೀಗಾಗಿ ಅವರು ಒಪ್ಪಲಿಲ್ಲ. ಇದೊಂದು ಸುರಕ್ಷತಾ ಕ್ರಮವಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಪಾಕ್ ವಾಯು ಪ್ರದೇಶ ಪ್ರವೇಶಿಸಿದ್ದ ಶ್ರೀನಗರ – ಜಮ್ಮು ವಿಮಾನ : ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ಜಮ್ಮುವಿಗೆ ಇಂಡಿಗೋ ವಿಮಾನವೊಂದು ಭಾನುವಾರ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತ್ತು. ಈ ಸಂಬಂಧ ಮಾಹಿತಿ ನೀಡಿದ ಅಧಿಕಾರಿ, “ಇಂಡಿಗೋ 6e-2124 ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತು ಮತ್ತು ವಿಮಾನವನ್ನು ಅಮೃತಸರಕ್ಕೆ ಮಾರ್ಗ ಬದಲಾವಣೆ ಮಾಡಲಾಯ್ತು” ಎಂದು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಈ ಘಟನೆ ಕೆಲ ಕಾಲ ಅಧಿಕಾರಿಗಳಲ್ಲಿ ಆತಂಕ ಮೂಡಿಸಿತ್ತಾದರೂ ಅದೃಷ್ಟವಶಾತ್ ವಿಮಾನ ಯಶಸ್ವಿಯಾಗಿ ಅಮೃತಸರದ ಕಡೆಗೆ ಮಾರ್ಗ ಬದಲಾವಣೆಯಾಗಿ ಅಲ್ಲೇ ಲ್ಯಾಂಡ್ ಆಗಿದೆ. ಇನ್ನು, ಈ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಪರಿಸ್ಥಿತಿಯ ಬಗ್ಗೆ ವಿಮಾನಯಾನ ಸಂಸ್ಥೆಯು ಎರಡೂ ದೇಶಗಳಲ್ಲಿನ ಅಧಿಕಾರಿಗಳಿಗೆ ತಿಳಿಸಿತ್ತು ಎಂದೂ ತಿಳಿದುಬಂದಿದೆ. ಹಾಗೆ, ವಿಮಾನದ ತಿರುವಿನ ಬಗ್ಗೆ ಜಮ್ಮು ಮತ್ತು ಲಾಹೋರ್ ಎಟಿಸಿ ನಡುವೆ ಸಮನ್ವಯ ಸಾಧಿಸಲಾಗಿತ್ತು ಎಂದೂ ಹೇಳಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…