ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್ನಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಯಿತು. ಬಳಿಕ ದೆಹಲಿಯಲ್ಲಿ ಇಳಿಸಲು ನಿಶಾನೆ ಸಿಕ್ಕಿತಾದರೂ, ಕಾರ್ಯನಿರ್ವಹಣಾ ಅವಧಿ ಮುಗಿದಿದ್ದ ಕಾರಣ ವಿಮಾನ ಚಾಲನೆಗೆ ಪೈಲಟ್ ನಿರಾಕರಿಸಿದ. ಹೀಗಾಗಿ ಪ್ರಯಾಣಿಕರು ಜೈಪುರದಲ್ಲೇ ಸಿಲುಕುವಂತಾಯಿತು.
ಆಕ್ರೋಶಗೊಂಡ ಪ್ರಯಾಣಿಕರು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಏರ್ ಇಂಡಿಯಾಗೆ ಟ್ವಿಟ್ಟರ್ ಮೂಲಕ ದೂರು ನೀಡಿದರು. ಬಳಿಕ ಬದಲಿ ಪೈಲಟ್ನನ್ನು ಕಳುಹಿಸಿ ಪ್ರಯಾಣಿಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.
ಆಗಿದ್ದೇನು? : ಲಂಂಡನ್ನಿಂದ ದೆಹಲಿಗೆ 300 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಬೆಳಗಿನ ಜಾವ ದೆಹಲಿಗೆ ಆಗಮಿಸಿತು. ಆದರೆ ಪ್ರತಿಕೂಲ ಹವಾಮಾನ ಇದ್ದ ಕಾರಣ ದೆಹಲಿಯ ಆಗಸದಲ್ಲೇ 10 ನಿಮಿಷ ಹಾರಾಟ ನಡೆಸುವಂತೆ ಪೈಲಟ್ಗೆ ಸೂಚಿಸಲಾಯಿತು. ಹವಾಮಾನ ಸುಧಾರಿಸದ ಹಿನ್ನೆಲೆಯಲ್ಲಿ ಬೆಳಗಿನ ಜಾವ 4ಕ್ಕೆ ವಿಮಾನವನ್ನು ಜೈಪುರದಲ್ಲಿ ಇಳಿಸಲಾಯಿತು.
ಕೆಲ ಹೊತ್ತಿನ ಬಳಿಕ ದೆಹಲಿಯಲ್ಲಿ ವಿಮಾನ ಲ್ಯಾಂಡ್ ಮಾಡಲು ಅನುಮತಿ ಬಂತಾದರೂ ವಿಮಾನ ಹಾರಿಸಲು ಪೈಲಟ್ ನಿರಾಕರಿಸಿದರು. ಪೈಲಟ್ಗಳಿಗೆ ನಿರ್ದಿಷ್ಟ ಕರ್ತವ್ಯದ ಮಿತಿ ಇರುತ್ತದೆ. ಏರ್ ಇಂಡಿಯಾ ಪೈಲಟ್ ಆ ಮಿತಿಯನ್ನು ಮೀರಿದ್ದರು. ಹೀಗಾಗಿ ಅವರು ಒಪ್ಪಲಿಲ್ಲ. ಇದೊಂದು ಸುರಕ್ಷತಾ ಕ್ರಮವಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಪಾಕ್ ವಾಯು ಪ್ರದೇಶ ಪ್ರವೇಶಿಸಿದ್ದ ಶ್ರೀನಗರ – ಜಮ್ಮು ವಿಮಾನ : ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ಜಮ್ಮುವಿಗೆ ಇಂಡಿಗೋ ವಿಮಾನವೊಂದು ಭಾನುವಾರ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತ್ತು. ಈ ಸಂಬಂಧ ಮಾಹಿತಿ ನೀಡಿದ ಅಧಿಕಾರಿ, “ಇಂಡಿಗೋ 6e-2124 ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತು ಮತ್ತು ವಿಮಾನವನ್ನು ಅಮೃತಸರಕ್ಕೆ ಮಾರ್ಗ ಬದಲಾವಣೆ ಮಾಡಲಾಯ್ತು” ಎಂದು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಈ ಘಟನೆ ಕೆಲ ಕಾಲ ಅಧಿಕಾರಿಗಳಲ್ಲಿ ಆತಂಕ ಮೂಡಿಸಿತ್ತಾದರೂ ಅದೃಷ್ಟವಶಾತ್ ವಿಮಾನ ಯಶಸ್ವಿಯಾಗಿ ಅಮೃತಸರದ ಕಡೆಗೆ ಮಾರ್ಗ ಬದಲಾವಣೆಯಾಗಿ ಅಲ್ಲೇ ಲ್ಯಾಂಡ್ ಆಗಿದೆ. ಇನ್ನು, ಈ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಪರಿಸ್ಥಿತಿಯ ಬಗ್ಗೆ ವಿಮಾನಯಾನ ಸಂಸ್ಥೆಯು ಎರಡೂ ದೇಶಗಳಲ್ಲಿನ ಅಧಿಕಾರಿಗಳಿಗೆ ತಿಳಿಸಿತ್ತು ಎಂದೂ ತಿಳಿದುಬಂದಿದೆ. ಹಾಗೆ, ವಿಮಾನದ ತಿರುವಿನ ಬಗ್ಗೆ ಜಮ್ಮು ಮತ್ತು ಲಾಹೋರ್ ಎಟಿಸಿ ನಡುವೆ ಸಮನ್ವಯ ಸಾಧಿಸಲಾಗಿತ್ತು ಎಂದೂ ಹೇಳಿದ್ದಾರೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…