BREAKING NEWS

ಕೆಲಸದ ಸಮಯ ಮುಗಿಯಿತೆಂದು ದಿಲ್ಲಿ ತಲುಪಬೇಕಿದ್ದ 300 ಜನರ ಜೈಪುರದಲ್ಲೇ ಇಳಿಸಿ ಹೋದ ಏರ್‌ ಇಂಡಿಯಾ ಪೈಲಟ್‌!

ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್‌ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್‌ನಿಂದ ದೆಹಲಿಗೆ ಏರ್‌ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್‌ ಇಂಡಿಯಾ ವಿಮಾನ ಲ್ಯಾಂಡ್‌ ಆಯಿತು. ಬಳಿಕ ದೆಹಲಿಯಲ್ಲಿ ಇಳಿಸಲು ನಿಶಾನೆ ಸಿಕ್ಕಿತಾದರೂ, ಕಾರ್ಯನಿರ್ವಹಣಾ ಅವಧಿ ಮುಗಿದಿದ್ದ ಕಾರಣ ವಿಮಾನ ಚಾಲನೆಗೆ ಪೈಲಟ್‌ ನಿರಾಕರಿಸಿದ. ಹೀಗಾಗಿ ಪ್ರಯಾಣಿಕರು ಜೈಪುರದಲ್ಲೇ ಸಿಲುಕುವಂತಾಯಿತು.

ಆಕ್ರೋಶಗೊಂಡ ಪ್ರಯಾಣಿಕರು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಏರ್‌ ಇಂಡಿಯಾಗೆ ಟ್ವಿಟ್ಟರ್‌ ಮೂಲಕ ದೂರು ನೀಡಿದರು. ಬಳಿಕ ಬದಲಿ ಪೈಲಟ್‌ನನ್ನು ಕಳುಹಿಸಿ ಪ್ರಯಾಣಿಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಆಗಿದ್ದೇನು? : ಲಂಂಡನ್‌ನಿಂದ ದೆಹಲಿಗೆ 300 ಪ್ರಯಾಣಿಕರನ್ನು ಹೊತ್ತ ಏರ್‌ ಇಂಡಿಯಾ ವಿಮಾನ ಬೆಳಗಿನ ಜಾವ ದೆಹಲಿಗೆ ಆಗಮಿಸಿತು. ಆದರೆ ಪ್ರತಿಕೂಲ ಹವಾಮಾನ ಇದ್ದ ಕಾರಣ ದೆಹಲಿಯ ಆಗಸದಲ್ಲೇ 10 ನಿಮಿಷ ಹಾರಾಟ ನಡೆಸುವಂತೆ ಪೈಲಟ್‌ಗೆ ಸೂಚಿಸಲಾಯಿತು. ಹವಾಮಾನ ಸುಧಾರಿಸದ ಹಿನ್ನೆಲೆಯಲ್ಲಿ ಬೆಳಗಿನ ಜಾವ 4ಕ್ಕೆ ವಿಮಾನವನ್ನು ಜೈಪುರದಲ್ಲಿ ಇಳಿಸಲಾಯಿತು.

ಕೆಲ ಹೊತ್ತಿನ ಬಳಿಕ ದೆಹಲಿಯಲ್ಲಿ ವಿಮಾನ ಲ್ಯಾಂಡ್‌ ಮಾಡಲು ಅನುಮತಿ ಬಂತಾದರೂ ವಿಮಾನ ಹಾರಿಸಲು ಪೈಲಟ್‌ ನಿರಾಕರಿಸಿದರು. ಪೈಲಟ್‌ಗಳಿಗೆ ನಿರ್ದಿಷ್ಟ ಕರ್ತವ್ಯದ ಮಿತಿ ಇರುತ್ತದೆ. ಏರ್‌ ಇಂಡಿಯಾ ಪೈಲಟ್‌ ಆ ಮಿತಿಯನ್ನು ಮೀರಿದ್ದರು. ಹೀಗಾಗಿ ಅವರು ಒಪ್ಪಲಿಲ್ಲ. ಇದೊಂದು ಸುರಕ್ಷತಾ ಕ್ರಮವಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ಪಾಕ್‌ ವಾಯು ಪ್ರದೇಶ ಪ್ರವೇಶಿಸಿದ್ದ ಶ್ರೀನಗರ – ಜಮ್ಮು ವಿಮಾನ : ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ಜಮ್ಮುವಿಗೆ ಇಂಡಿಗೋ ವಿಮಾನವೊಂದು ಭಾನುವಾರ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತ್ತು. ಈ ಸಂಬಂಧ ಮಾಹಿತಿ ನೀಡಿದ ಅಧಿಕಾರಿ, “ಇಂಡಿಗೋ 6e-2124 ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತು ಮತ್ತು ವಿಮಾನವನ್ನು ಅಮೃತಸರಕ್ಕೆ ಮಾರ್ಗ ಬದಲಾವಣೆ ಮಾಡಲಾಯ್ತು” ಎಂದು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಈ ಘಟನೆ ಕೆಲ ಕಾಲ ಅಧಿಕಾರಿಗಳಲ್ಲಿ ಆತಂಕ ಮೂಡಿಸಿತ್ತಾದರೂ ಅದೃಷ್ಟವಶಾತ್‌ ವಿಮಾನ ಯಶಸ್ವಿಯಾಗಿ ಅಮೃತಸರದ ಕಡೆಗೆ ಮಾರ್ಗ ಬದಲಾವಣೆಯಾಗಿ ಅಲ್ಲೇ ಲ್ಯಾಂಡ್‌ ಆಗಿದೆ. ಇನ್ನು, ಈ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಪರಿಸ್ಥಿತಿಯ ಬಗ್ಗೆ ವಿಮಾನಯಾನ ಸಂಸ್ಥೆಯು ಎರಡೂ ದೇಶಗಳಲ್ಲಿನ ಅಧಿಕಾರಿಗಳಿಗೆ ತಿಳಿಸಿತ್ತು ಎಂದೂ ತಿಳಿದುಬಂದಿದೆ. ಹಾಗೆ, ವಿಮಾನದ ತಿರುವಿನ ಬಗ್ಗೆ ಜಮ್ಮು ಮತ್ತು ಲಾಹೋರ್ ಎಟಿಸಿ ನಡುವೆ ಸಮನ್ವಯ ಸಾಧಿಸಲಾಗಿತ್ತು ಎಂದೂ ಹೇಳಿದ್ದಾರೆ.

lokesh

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago