BREAKING NEWS

ಕೆಲಸದ ಸಮಯ ಮುಗಿಯಿತೆಂದು ದಿಲ್ಲಿ ತಲುಪಬೇಕಿದ್ದ 300 ಜನರ ಜೈಪುರದಲ್ಲೇ ಇಳಿಸಿ ಹೋದ ಏರ್‌ ಇಂಡಿಯಾ ಪೈಲಟ್‌!

ನವದೆಹಲಿ : ಪ್ರತಿಕೂಲ ಹವಾಮಾನ ಹಾಗೂ ಪೈಲಟ್‌ ಕರ್ತವ್ಯದ ಸಮಯ ಮುಗಿದ ಪರಿಣಾಮವಾಗಿ ಲಂಡನ್‌ನಿಂದ ದೆಹಲಿಗೆ ಏರ್‌ ಇಂಡಿಯಾ ವಿಮಾನದಲ್ಲಿ ಆಗಮಿಸುತ್ತಿದ್ದ 300 ಪ್ರಯಾಣಿಕರು ಪಡಿಪಾಟಲು ಅನುಭವಿಸಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಜೈಪುರದಲ್ಲಿ ಏರ್‌ ಇಂಡಿಯಾ ವಿಮಾನ ಲ್ಯಾಂಡ್‌ ಆಯಿತು. ಬಳಿಕ ದೆಹಲಿಯಲ್ಲಿ ಇಳಿಸಲು ನಿಶಾನೆ ಸಿಕ್ಕಿತಾದರೂ, ಕಾರ್ಯನಿರ್ವಹಣಾ ಅವಧಿ ಮುಗಿದಿದ್ದ ಕಾರಣ ವಿಮಾನ ಚಾಲನೆಗೆ ಪೈಲಟ್‌ ನಿರಾಕರಿಸಿದ. ಹೀಗಾಗಿ ಪ್ರಯಾಣಿಕರು ಜೈಪುರದಲ್ಲೇ ಸಿಲುಕುವಂತಾಯಿತು.

ಆಕ್ರೋಶಗೊಂಡ ಪ್ರಯಾಣಿಕರು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಏರ್‌ ಇಂಡಿಯಾಗೆ ಟ್ವಿಟ್ಟರ್‌ ಮೂಲಕ ದೂರು ನೀಡಿದರು. ಬಳಿಕ ಬದಲಿ ಪೈಲಟ್‌ನನ್ನು ಕಳುಹಿಸಿ ಪ್ರಯಾಣಿಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.

ಆಗಿದ್ದೇನು? : ಲಂಂಡನ್‌ನಿಂದ ದೆಹಲಿಗೆ 300 ಪ್ರಯಾಣಿಕರನ್ನು ಹೊತ್ತ ಏರ್‌ ಇಂಡಿಯಾ ವಿಮಾನ ಬೆಳಗಿನ ಜಾವ ದೆಹಲಿಗೆ ಆಗಮಿಸಿತು. ಆದರೆ ಪ್ರತಿಕೂಲ ಹವಾಮಾನ ಇದ್ದ ಕಾರಣ ದೆಹಲಿಯ ಆಗಸದಲ್ಲೇ 10 ನಿಮಿಷ ಹಾರಾಟ ನಡೆಸುವಂತೆ ಪೈಲಟ್‌ಗೆ ಸೂಚಿಸಲಾಯಿತು. ಹವಾಮಾನ ಸುಧಾರಿಸದ ಹಿನ್ನೆಲೆಯಲ್ಲಿ ಬೆಳಗಿನ ಜಾವ 4ಕ್ಕೆ ವಿಮಾನವನ್ನು ಜೈಪುರದಲ್ಲಿ ಇಳಿಸಲಾಯಿತು.

ಕೆಲ ಹೊತ್ತಿನ ಬಳಿಕ ದೆಹಲಿಯಲ್ಲಿ ವಿಮಾನ ಲ್ಯಾಂಡ್‌ ಮಾಡಲು ಅನುಮತಿ ಬಂತಾದರೂ ವಿಮಾನ ಹಾರಿಸಲು ಪೈಲಟ್‌ ನಿರಾಕರಿಸಿದರು. ಪೈಲಟ್‌ಗಳಿಗೆ ನಿರ್ದಿಷ್ಟ ಕರ್ತವ್ಯದ ಮಿತಿ ಇರುತ್ತದೆ. ಏರ್‌ ಇಂಡಿಯಾ ಪೈಲಟ್‌ ಆ ಮಿತಿಯನ್ನು ಮೀರಿದ್ದರು. ಹೀಗಾಗಿ ಅವರು ಒಪ್ಪಲಿಲ್ಲ. ಇದೊಂದು ಸುರಕ್ಷತಾ ಕ್ರಮವಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ಪಾಕ್‌ ವಾಯು ಪ್ರದೇಶ ಪ್ರವೇಶಿಸಿದ್ದ ಶ್ರೀನಗರ – ಜಮ್ಮು ವಿಮಾನ : ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ಜಮ್ಮುವಿಗೆ ಇಂಡಿಗೋ ವಿಮಾನವೊಂದು ಭಾನುವಾರ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತ್ತು. ಈ ಸಂಬಂಧ ಮಾಹಿತಿ ನೀಡಿದ ಅಧಿಕಾರಿ, “ಇಂಡಿಗೋ 6e-2124 ಪ್ರತಿಕೂಲ ಹವಾಮಾನದಿಂದಾಗಿ ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿತು ಮತ್ತು ವಿಮಾನವನ್ನು ಅಮೃತಸರಕ್ಕೆ ಮಾರ್ಗ ಬದಲಾವಣೆ ಮಾಡಲಾಯ್ತು” ಎಂದು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಈ ಘಟನೆ ಕೆಲ ಕಾಲ ಅಧಿಕಾರಿಗಳಲ್ಲಿ ಆತಂಕ ಮೂಡಿಸಿತ್ತಾದರೂ ಅದೃಷ್ಟವಶಾತ್‌ ವಿಮಾನ ಯಶಸ್ವಿಯಾಗಿ ಅಮೃತಸರದ ಕಡೆಗೆ ಮಾರ್ಗ ಬದಲಾವಣೆಯಾಗಿ ಅಲ್ಲೇ ಲ್ಯಾಂಡ್‌ ಆಗಿದೆ. ಇನ್ನು, ಈ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಪರಿಸ್ಥಿತಿಯ ಬಗ್ಗೆ ವಿಮಾನಯಾನ ಸಂಸ್ಥೆಯು ಎರಡೂ ದೇಶಗಳಲ್ಲಿನ ಅಧಿಕಾರಿಗಳಿಗೆ ತಿಳಿಸಿತ್ತು ಎಂದೂ ತಿಳಿದುಬಂದಿದೆ. ಹಾಗೆ, ವಿಮಾನದ ತಿರುವಿನ ಬಗ್ಗೆ ಜಮ್ಮು ಮತ್ತು ಲಾಹೋರ್ ಎಟಿಸಿ ನಡುವೆ ಸಮನ್ವಯ ಸಾಧಿಸಲಾಗಿತ್ತು ಎಂದೂ ಹೇಳಿದ್ದಾರೆ.

lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

22 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

22 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

22 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

22 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

22 hours ago