BREAKING NEWS

ಟೆಲ್ ಅವೀವ್​ಗೆ ವಿಮಾನ ಸೇವೆ ಸ್ಥಗಿತಗೊಳಿಸಿದ ಏರ್​ ಇಂಡಿಯಾ

ನವದೆಹಲಿ : ಇಸ್ರೇಲ್ ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಮಾನ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಐದು ಏರ್ ಇಂಡಿಯಾ ವಿಮಾನಗಳು ಕಾರ್ಯಾಚರಿಸುತ್ತಿವೆ.

ಕಳೆದ ತಿಂಗಳು, ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ವಿಮಾನಯಾನವು ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಕೆಲವು ಚಾರ್ಟರ್ಡ್ ವಿಮಾನಗಳನ್ನು ಕಳುಹಿಸಿತ್ತು.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದರು, ಘಟನೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾದ ಮೇಲೆ ದಾಳಿ ನಡೆಸಿದ್ದು, ಅಲ್ಲೂ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯುದ್ಧವನ್ನು ನಾವು ಪ್ರಾರಂಭ ಮಾಡಿಲ್ಲ ಆದರೆ ನಾವೇ ಅಂತ್ಯ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ.

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ತಿಳಿಸಿದೆ.

ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದರು, ಮತ್ತು 70 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮೊದಲು ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

lokesh

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

20 mins ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

1 hour ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

2 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

2 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

3 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

3 hours ago