BREAKING NEWS

ಟೆಲ್ ಅವೀವ್​ಗೆ ವಿಮಾನ ಸೇವೆ ಸ್ಥಗಿತಗೊಳಿಸಿದ ಏರ್​ ಇಂಡಿಯಾ

ನವದೆಹಲಿ : ಇಸ್ರೇಲ್ ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಮಾನ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಐದು ಏರ್ ಇಂಡಿಯಾ ವಿಮಾನಗಳು ಕಾರ್ಯಾಚರಿಸುತ್ತಿವೆ.

ಕಳೆದ ತಿಂಗಳು, ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ವಿಮಾನಯಾನವು ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಕೆಲವು ಚಾರ್ಟರ್ಡ್ ವಿಮಾನಗಳನ್ನು ಕಳುಹಿಸಿತ್ತು.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದರು, ಘಟನೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾದ ಮೇಲೆ ದಾಳಿ ನಡೆಸಿದ್ದು, ಅಲ್ಲೂ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯುದ್ಧವನ್ನು ನಾವು ಪ್ರಾರಂಭ ಮಾಡಿಲ್ಲ ಆದರೆ ನಾವೇ ಅಂತ್ಯ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ.

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ತಿಳಿಸಿದೆ.

ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದರು, ಮತ್ತು 70 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮೊದಲು ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

14 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

16 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

20 mins ago