BREAKING NEWS

ಎನ್‌ಡಿಎ ಸಭೆಯಲ್ಲಿ ಅಜಿತ್ ಪವಾರ್ ಬಣ ಭಾಗವಹಿಸಲಿದೆ: ಪ್ರಫುಲ್ ಪಟೇಲ್

ನವದೆಹಲಿ: ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಬಣ ಮತ್ತು ಅದರ 15 ಶಾಸಕರು ಸೋಮವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಪಕ್ಷ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.

ಈ ಮಧ್ಯೆ ಮಂಗಳವಾರ ದೆಹಲಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಸಭೆಯಲ್ಲಿ ಅಜಿತ್ ಪವಾರ್ ಮತ್ತು ಅವರ ಬಣ ಭಾಗವಹಿಸಲಿದೆ ಎಂದು ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರು ತಿಳಿಸಿದ್ದಾರೆ.

“ಶರದ್ ಪವಾರ್ ಅವರೊಂದಿಗಿನ ಇಂದಿನ ಸಭೆಯಲ್ಲಿ, ಎನ್‌ಸಿಪಿ ಒಗ್ಗಟ್ಟಿನಿಂದ ಇರುವುದನ್ನು ಖಚಿತಪಡಿಸಿಕೊಳ್ಳಲು ನಾವು ಮತ್ತೆ ಅವರನ್ನು ಕೇಳಿಕೊಂಡಿದ್ದೇವೆ” ಎಂದು ಪಟೇಲ್ ಹೇಳಿದ್ದಾರೆ.

ಭಾನುವಾರ ನಡೆದ ಸಭೆಯಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಶಾಸಕರು (ಅಜಿತ್ ಪವಾರ್ ಬಣದ) ಇಂದು ಹಾಜರಿದ್ದರು ಎಂದು ಪಟೇಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

10 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

11 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

11 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

12 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

12 hours ago