ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿಲ್ಲ. ನಾನು ಶಿವನ ಭಕ್ತ. ಎಲ್ಲಾ ದೇವರುಗಳು ನನ್ನ ಹೃದಯದಲ್ಲಿದ್ದಾರೆ. ರಾಮ ಮಂದಿರ ಉದ್ಘಾಟನೆಗೆ ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗುತ್ತಿರುವುದು ಸಂತೋಷ ಎಂದರು.
ಫುಡ್ ಆಕ್ಟ್ ತಂದಿದ್ಯಾರು ಎಂಬುದನ್ನೇ ಬೊಮ್ಮಾಯಿ ಮರೆತಿದ್ದಾರೆ. ಮೊದಲು ಅನ್ನಭಾಗ್ಯ ಯೋಜನೆಯ ಪ್ರಾರಂಭಿಸಿದ್ದೆ ಸಿಎಂ ಸಿದ್ದರಾಮಯ್ಯ. ಪಾಪ ಬಸವರಾಜ ಬೊಮ್ಮಾಯಿಗೆ ಇದು ಮರೆತುಹೋಗಿದೆ ಎಂದು ಡಿಕೆ ಶಿವಕುಮಾರ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು.
ಹೆಚ್ಡಿಡಿಗೆ ಡಿಕೆಶಿ ತಿರುಗೇಟು : ಸಿದ್ದರಾಮಯ್ಯ ಡಿಕೆಶಿ ಇಂದಲೇ ಕಾಂಗ್ರೆಸ್ ಅಂತ್ಯ ಎಂಬ ಹೆಚ್.ಡಿ.ದೇವೇಗೌಡ ಅವರ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ 138 ವರ್ಷಗಳ ಇತಿಹಾಸ ಇದೆ. ಇಬ್ಬರು ಪಕ್ಷೇತರರು ನಮ್ಮ ಪಕ್ಷಕ್ಕೆ ಸೇರಿದ್ದಾರೆ. ದೇವೇಗೌಡರು ಪದೇಪದೇ ನಮ್ಮನ್ನು ನೆನಪಿಸಿಕೊಂಡರೆ ಸ್ಫೂರ್ತಿ ತುಂಬಿದಂತಾಗುತ್ತದೆ ದೇವೇಗೌಡರು ಏನೇ ಮಾತನಾಡಿದರು ಕೂಡ ಅದು ನಮಗೆ ಆಶೀರ್ವಾದವಾಗಿದೆ ಎಂದಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…